ಕೊಂಡ್ವಾ (ಪುಣೆ): ಮಕ್ಕಳ ಆಟಿಕೆಯ ವಿಷಯವಾಗಿ ಜಗಳ; ಧಾರ್ಮಿಕ ಬಣ್ಣ ಬಳಿಯಲು ಯತ್ನ!

ಸಮಾಜ ಘಾತುಕರಿಂದ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಪುಣೆ – ಕೊಂಡ್ವಾದಲ್ಲಿ ಇಬ್ಬರು ಮಕ್ಕಳ ನಡುವೆ ಆಟಿಕೆಯ ವಿಷಯವಾಗಿ ಸಣ್ಣ ಜಗಳ ನಡೆದಿತ್ತು. ಈ ಸಣ್ಣ ಘಟನೆಯನ್ನು ಬಳಸಿಕೊಂಡು ಅಶಾಂತಿ ಹರಡುವ ಕೆಲ ಶಕ್ತಿಗಳು ಎರಡು ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಪ್ರಯತ್ನಿಸಿದವು. ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲು ಕೆಲವು ಸಮಾಜ ಘಾತುಕರು ಕೊಂಡ್ವಾ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಮೊಕದ್ದಮೆಗಳನ್ನು (FIR) ದಾಖಲಿಸಲಾಗಿದೆ. ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಂಪಾದಕೀಯ ನಿಲುವು

  • ಧಾರ್ಮಿಕ ಬಣ್ಣ ಬಳಿಯಲು ಯತ್ನಿಸಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸುವಷ್ಟು ಧೈರ್ಯ ತೋರಿದವರು ಯಾರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ!
  • ಇಂಥವರ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವುದೇ?