ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

೧. ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆಯವರ ಬರವಣಿಗೆ

೧ ಅ. ಇದಂ ನ ಮಮ : ‘ವಿವಿಧ ವಿಷಯಗಳ ಮೇಲೆ ಸೂಕ್ಷ್ಮಜ್ಞಾನವನ್ನು ಪಡೆಯುವ ಸಾಧಕರಿಗೆ ಸೂಕ್ಷ್ಮದಿಂದ ಲಭಿಸಿದ ಜ್ಞಾನ, ಹಾಗೆಯೇ ವಿವಿಧ ಗ್ರಂಥಗಳಿಂದ ಸಂಗ್ರಹಿಸಿದ ಬರವಣಿಗೆಯಿಂದಾಗಿ’, ನನ್ನಿಂದ ಗ್ರಂಥಗಳು ಸಿದ್ಧವಾಗುತ್ತಿವೆ. ಸಂಗೀತಕ್ಕೆ ಸಂಬಂಧಪಟ್ಟ ಗ್ರಂಥಗಳನ್ನು ಸೌ. ಅಂಜಲಿ ಗಾಡಗೀಳ (ಈಗಿನ ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆಯವರ ಒಬ್ಬ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ) ಇವರು ಬರೆಯುತ್ತಾರೆ. ಕಲೆ ಮತ್ತು ಅಕ್ಷರಗಳಿಗೆ ಸಂಬಂಧಿಸಿದ ಗ್ರಂಥಗಳನ್ನು ಸೌ. ಜಾಹ್ನವಿ ಶಿಂದೆ ಇವರು ಬರೆಯುತ್ತಾರೆ. ಇದರಲ್ಲಿ ನನ್ನದೇನೂ ಇಲ್ಲ. ಇದಂ ನ ಮಮ.’ (ಅಂದರೆ, ‘ಇದು ನನ್ನದಲ್ಲ.’) (೧೨.೨.೨೦೦೭)

೨. ಮೇಲಿನ ಬರವಣಿಗೆಯ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !

ಶ್ರೀ. ರಾಮ ಹೊನಪ

೨ ಅ. ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆಯವರ ಜ್ಞಾನಕಾರ್ಯ : ಸದ್ಯದ ಕಲಿಯುಗದಲ್ಲಿ ರಜ-ತಮ ಮತ್ತು ಕೆಟ್ಟ ಶಕ್ತಿಗಳ ಪ್ರಭಾವ ಬಹಳ ಹೆಚ್ಚಿದೆ. ಸಾಧಾರಣ ಸಮಾಜದ ಸಾತ್ತ್ವಿಕತೆಯು ಕಡಿಮೆಯಾಗಿದೆ. ಆದ್ದರಿಂದ ಸಾಧನೆ ಮತ್ತು ಧರ್ಮಾಚರಣೆಯ ಮಹತ್ವವನ್ನು ಸಮಾಜದ ಮನಸ್ಸಿನ ಮೇಲೆ ಸರಳ ಮತ್ತು ಆಧ್ಯಾತ್ಮಿಕ ಭಾಷೆಯಲ್ಲಿ ಬಿಂಬಿಸುವುದು ಮಹತ್ವದ್ದಾಗಿದೆ. ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ಜ್ಞಾನದ ಮೂಲಕ ಸನಾತನ ಧರ್ಮವನ್ನು ಉಳಿಸುವ ಕಾರ್ಯವು ಅವತಾರಿ ಸ್ವರೂಪದ್ದಾಗಿದೆ. ಅವರ ಈ ಜ್ಞಾನಕಾರ್ಯದ ಆಧ್ಯಾತ್ಮಿಕ ಲಾಭವು ಈಗಿನ ಮತ್ತು ಮುಂದಿನ ಪೀಳಿಗೆಗಳಿಗೂ ಲಭಿಸಲಿದೆ. ಈ ಜ್ಞಾನವು ದೀರ್ಘಕಾಲದ ವರೆಗೆ ಉಳಿಯಲಿದೆ.

೨ ಆ. ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆಯವರ ಸಂಕಲ್ಪದಿಂದ ಅನೇಕ ಸಾಧಕರಿಗೆ ಗ್ರಂಥಗಳ ಬರವಣಿಗೆಯ ಪ್ರೇರಣೆ ಸಿಗುವುದು ಮತ್ತು ಸಾಧಕರ ವ್ಯಷ್ಟಿ ಸಾಧನೆಯೊಂದಿಗೆ ಸಮಷ್ಟಿ ಸಾಧನೆಯೂ ಪರಿಣಾಮಕಾರಿಯಾಗಿ ಆಗುವುದು : ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ಜ್ಞಾನಕಾರ್ಯದ ಸಂಕಲ್ಪದಿಂದ ಕೆಲವು ಸಾಧಕರಿಗೆ ವಿವಿಧ ವಿಷಯಗಳ ಬಗ್ಗೆ ಸೂಕ್ಷ್ಮ ಜ್ಞಾನವು ಲಭಿಸುತ್ತದೆ, ಹಾಗೆಯೇ ಕೆಲವು ಸಾಧಕರಿಗೆ ಹೊಸ ವಿಷಯಗಳ ಬಗ್ಗೆ ಬರೆಯಲು ಸ್ಫೂರ್ತಿ ಸಿಗುತ್ತದೆ. ಈ ಕಾರ್ಯವನ್ನು ಮಾಡಲು ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರು ಸಾಧಕರಿಗೆ ದಿಶೆ ಮತ್ತು ಶಕ್ತಿಯನ್ನು ನೀಡುತ್ತಾರೆ. ಈ ಪ್ರಕ್ರಿಯೆಯ ಮೂಲಕ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರು ಇಂತಹ ಸಾಧಕರ ಆಧ್ಯಾತ್ಮಿಕ ಕ್ಷಮತೆಯನ್ನು ಹೆಚ್ಚಿಸಿ ಅವರ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಿಸಿಕೊಳ್ಳುತ್ತಾರೆ. ಆದ್ದರಿಂದ ಆ ಸಾಧಕರ ವ್ಯಷ್ಟಿ ಸಾಧನೆಯೊಂದಿಗೆ ಸಮಷ್ಟಿ ಸಾಧನೆಯೂ ಪರಿಣಾಮಕಾರಿಯಾಗಿ ಆಗುತ್ತದೆ.

೨ ಇ. ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆಯವರ ಅಹಂ ರಹಿತ ಸ್ಥಿತಿಯಿಂದಾಗಿ ಜ್ಞಾನಕಾರ್ಯದ ಶ್ರೇಯಸ್ಸನ್ನು ಅವರು ಸಾಧಕರಿಗೆ ಕೊಡುತ್ತಾರೆ : ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ಆಶೀರ್ವಾದದಿಂದ ಕೆಲವು ಸಾಧಕರಿಂದ ಜ್ಞಾನಕಾರ್ಯ ಘಟಿಸುತ್ತದೆ. ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರಲ್ಲಿ ‘ಎಲ್ಲವನ್ನೂ ಈಶ್ವರನೇ ಮಾಡುತ್ತಾನೆ’ ಎಂಬ ಭಾವವಿದ್ದು, ಅವರ ಸ್ಥಿತಿಯು ಅಹಂರಹಿತವಾಗಿದೆ. ಆದ್ದರಿಂದ ಎಲ್ಲವೂ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರಿಂದಲೇ ನಡೆಯುತ್ತಿದ್ದರೂ ಅವರು ಜ್ಞಾನಕಾರ್ಯದ ಶ್ರೇಯಸ್ಸನ್ನು ಜ್ಞಾನಕಾರ್ಯವನ್ನು ಮಾಡುವ ಕೆಲವು ಸಾಧಕರಿಗೆ ನೀಡುತ್ತಾರೆ. ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ಅಹಂರಹಿತ ಸ್ಥಿತಿಯಿಂದಾಗಿ ಅವರ ಮನಸ್ಸಿನಲ್ಲಿ ‘ಇದಂ ನ ಮಮ’ (ಅಂದರೆ, ‘ಇದು ನನ್ನದಲ್ಲ.’), ಎಂಬ ವಿಚಾರ ಬರುತ್ತದೆ. ಆದ್ದರಿಂದ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ಜ್ಞಾನಕಾರ್ಯ ಮತ್ತು ಅದರ ಪರಿಣಾಮವು ಅನೇಕ ಪಟ್ಟು ಹೆಚ್ಚಾಗುತ್ತದೆ.’

– ಶ್ರೀ. ರಾಮ ಹೊನಪ (ಸೂಕ್ಷ್ಮಜ್ಞಾನವನ್ನು ಪ್ರಾಪ್ತಮಾಡಿಕೊಳ್ಳುವ ಸಾಧಕ), ಸನಾತನ ಆಶ್ರಮ, ರಾಮನಾಥಿ, ಗೋವಾ. (ಜ್ಞಾನ ಪಡೆದ ದಿನಾಂಕ : ೪.೨.೨೦೨೬)

  • ಕೆಟ್ಟ ಶಕ್ತಿ : ವಾತಾವರಣದಲ್ಲಿ ಉತ್ತಮ ಹಾಗೂ ಕೆಟ್ಟ ಎರಡೂ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಒಳ್ಳೆಯ ಶಕ್ತಿ ಒಳ್ಳೆಯ ಕಾರ್ಯಕ್ಕಾಗಿ ಮಾನವನಿಗೆ ಸಹಾಯ ಮಾಡುತ್ತವೆ ಹಾಗೂ ಕೆಟ್ಟ ಶಕ್ತಿಗಳು ಅವನಿಗೆ ತೊಂದರೆ ಕೊಡುತ್ತವೆ. ಹಿಂದಿನ ಕಾಲದಲ್ಲಿ ಋಷಿಮುನಿಗಳ ಯಜ್ಞಗಳಲ್ಲಿ ರಾಕ್ಷಸರು ವಿಘ್ನಗಳನ್ನು ತಂದಿರುವ ಅನೇಕ ಕಥೆಗಳು ವೇದ -ಪುರಾಣಗಳಲ್ಲಿ ಇರುತ್ತವೆ. ‘ಅಥರ್ವವೇದದಲ್ಲಿ ಅನೇಕ ಕಡೆಗಳಲ್ಲಿ ಕೆಟ್ಟ ಶಕ್ತಿ. ಉದಾ. ಅಸುರರು, ರಾಕ್ಷಸರು, ಪಿಶಾಚಿ ಇವರ ಪ್ರತಿಬಂಧದ ಮಂತ್ರಗಳನ್ನು ಹೇಳಲಾಗಿದೆ. ಕೆಟ್ಟ ಶಕ್ತಿಗಳ ತೊಂದರೆಯ ನಿವಾರಣೆಗಾಗಿ ವಿವಿಧ ಆಧ್ಯಾತ್ಮಿಕ ಉಪಾಯಗಳನ್ನು ವೇದ ಮತ್ತು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.
  • ಸೂಕ್ಷ್ಮ : ಪ್ರತ್ಯಕ್ಷ ಕಾಣುವ ಅವಯವಗಳಾದ ಮೂಗು, ಕಿವಿ, ಕಣ್ಣುಗಳು, ನಾಲಿಗೆ ಮತ್ತು ಚರ್ಮ ಇವು ಪಂಚಜ್ಞಾನೇಂದ್ರಿಯಗಳಾಗಿವೆ. ಈ ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಆಚೆಗಿನ ಎಂದರೆ ಸೂಕ್ಷ್ಮ. ಸಾಧನೆಯಲ್ಲಿ ಪ್ರಗತಿ ಮಾಡಿಕೊಂಡ ಕೆಲವು ವ್ಯಕ್ತಿಗಳಿಗೆ ಈ ಸೂಕ್ಷ್ಮ ಸಂವೇದನೆಯ ಅರಿವಾಗುತ್ತದೆ. ಈ ಸೂಕ್ಷ್ಮ ಜ್ಞಾನದ ಬಗ್ಗೆ ವಿವಿಧ ಧರ್ಮಗ್ರಂಥಗಳಲ್ಲಿ ಉಲ್ಲೇಖವಿದೆ
  • ಸೂಕ್ಷ್ಮದಲ್ಲಿ ಕಾಣಿಸುವುದು, ಕೇಳಿಸುವುದು ಇತ್ಯಾದಿ (ಪಂಚ ಸೂಕ್ಷ್ಮ ಜ್ಞಾನೇಂದ್ರಿಯಗಳಿಂದ ಜ್ಞಾನಪ್ರಾಪ್ತಿಯಾಗುವುದು) : ಕೆಲವು ಸಾಧಕರ ಅಂತರ್ದೃಷ್ಟಿ ಜಾಗೃತವಾಗುತ್ತದೆ, ಎಂದರೆ ಅವರಿಗೆ ಕಣ್ಣಿಗೆ ಕಾಣಿಸದಿರುವುದು ಕಾಣಿಸುತ್ತದೆ, ಇನ್ನು ಕೆಲವರಿಗೆ ಸೂಕ್ಷ್ಮದಲ್ಲಿನ ನಾದ ಅಥವಾ ಶಬ್ದಗಳು ಕೇಳಿಸುತ್ತವೆ.
  • ಸೂಕ್ಷ್ಮ-ಜಗತ್ತು : ಯಾವುದು ಸ್ಥೂಲ ಪಂಚಜ್ಞಾನೇಂದ್ರಿಯಗಳಿಗೆ (ಮೂಗು, ನಾಲಿಗೆ, ಕಣ್ಣು, ಚರ್ಮ ಮತ್ತು ಕಿವಿಗಳಿಗೆ) ತಿಳಿಯುವುದಿಲ್ಲವೋ; ಆದರೆ ಯಾವುದರ ಅಸ್ತಿತ್ವದ ಜ್ಞಾನವು ಸಾಧನೆ ಮಾಡುವವನಿಗೆ ಆಗುತ್ತದೆಯೋ, ಅದನ್ನು ‘ಸೂಕ್ಷ್ಮ-ಜಗತ್ತು’ ಎಂದು ಕರೆಯುತ್ತಾರೆ.
  • ಸೂಕ್ಷ್ಮ-ಪರೀಕ್ಷಣೆ : ಯಾವುದಾದರೂ ಘಟನೆ ಅಥವಾ ಪ್ರಕ್ರಿಯೆಯ ಬಗ್ಗೆ ಚಿತ್ತಕ್ಕೆ (ಅಂತರ್ಮನಸ್ಸಿಗೆ) ಏನು ಅನಿಸುತ್ತದೆಯೋ, ಅದನ್ನು ‘ಸೂಕ್ಷ್ಮ-ಪರೀಕ್ಷಣೆ’ ಎನ್ನುತ್ತಾರೆ.