ಬಕ್ರೀದ್ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳಿಂದ ಪೊಲೀಸರಿಗೆ ರಜಾಕಾರಿ ಆದೇಶ
ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಾಣಿಗಳನ್ನು ಸಾಗಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ!

ಮುಂಬಯಿ – ಪ್ರಾಣಿಗಳನ್ನು ಸಾಗಿಸುವ ವಾಹನಗಳನ್ನು ತಡೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಹಾಗೆಯೇ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಾಣಿಗಳನ್ನು ಸಾಗಿಸಿದ ಆರೋಪದ ಮೇಲೆ ಪ್ರಾಣಿ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರವಾಗಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು ಮೇ ೨೮ ರಂದು ನಡೆಯಲಿರುವ ಬಕ್ರೀದ್ ಹಿನ್ನೆಲೆಯಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷದ ಭಿವಂಡಿ (ಪೂರ್ವ) ಶಾಸಕ ರೈಸ್ ಶೇಖ್ ಮಾಹಿತಿ ನೀಡಿದ್ದಾರೆ. ಮುಂಬಯಿನ ಅಲ್ಪಸಂಖ್ಯಾತ ಸಮುದಾಯದ ಸರ್ವಪಕ್ಷಗಳ ಶಾಸಕರು ಹಾಗೂ ರಾಜ್ಯ ಖಾಟಿಕ್ ಮಹಾಸಂಘದ ಪ್ರತಿನಿಧಿಗಳೊಂದಿಗೆ ಸಚಿವಾಲಯದಲ್ಲಿ ಆಡಳಿತ ಮತ್ತು ಪೊಲೀಸ್ ಆಡಳಿತದ ಜಂಟಿ ಸಭೆ ನಡೆಯಿತು. ಇದರ ನಂತರ ಶೇಖ್ ಮಾತನಾಡುತ್ತಿದ್ದರು.
ಬಕ್ರೀದ್ ನಿಮಿತ್ತ ದೇವನಾರ್ ಕಸಾಯಿಖಾನೆಯಲ್ಲಿ ಪ್ರಾಣಿ ವಧೆಗೆ ಇದ್ದ ೨೦೦ ರೂಪಾಯಿ ಶುಲ್ಕವನ್ನು ೨೦ ರೂಪಾಯಿಗೆ ಇಳಿಸಲಾಗಿದೆ. ಮುಂಬಯಿನಲ್ಲಿ ಪ್ರಾಣಿ ವಧೆಗಾಗಿ ಇದ್ದ ೭೦ ಸ್ಥಳಗಳನ್ನು ೧೦೯ ಕ್ಕೆ ಹೆಚ್ಚಿಸಲಾಗಿದೆ. ಕೆಲವು ವಸತಿ ಸಂಘಗಳಿಗೆ (ಹೌಸಿಂಗ್ ಸೊಸೈಟಿಗಳಿಗೆ) ಪ್ರಾಣಿ ವಧೆಗಾಗಿ ಈಗಾಗಲೇ ಅನುಮತಿ ನೀಡಲಾಗಿದೆ. ಅಂಗಡಿಯವರಿಗೂ ಸಹ ಅಂತಹದೇ ಅನುಮತಿಯನ್ನು ನೀಡಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ