ಪೊಲೀಸರ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ವೇಳೆ ನಡೆದ ಘಟನೆ
ಬರೋಬ್ಬರಿ ೫೦೦ ಕ್ಕೂ ಹೆಚ್ಚು ಕೊಳೆಗೇರಿಗಳ ಅತಿಕ್ರಮಣ

ಮುಂಬಯಿ – ಇಲ್ಲಿನ ಬಾಂದ್ರಾ ರೈಲು ನಿಲ್ದಾಣದ ಪರಿಸರದಲ್ಲಿನ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ. ಇಲ್ಲಿರುವ ಅಕ್ರಮ ಮಸೀದಿಯ ಮೇಲೆ ಬುಲ್ಡೋಜರ್ ಚಲಾಯಿಸಲಾಗುತ್ತಿದ್ದಾಗ ಅಲ್ಲಿದ್ದ ಮುಸಲ್ಮಾನರು ಅದನ್ನು ವಿರೋಧಿಸಿದರು. ಅವರು ಪೊಲೀಸರ ಮೇಲೆ ಬಾಟಲಿಗಳು ಮತ್ತು ಇತರ ವಸ್ತುಗಳನ್ನು ಎಸೆದರು, ಹಾಗೆಯೇ ದೊಡ್ಡ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿದರು. ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ನಡೆಸಿದರು. ಇಲ್ಲಿ ಹೆಚ್ಚುತ್ತಿರುವ ಜನಸಂದಣಿಯನ್ನು ಕಂಡು ಪೊಲೀಸರು ಹೆಚ್ಚಿನ ಪಡೆಗಳನ್ನು ಕರೆಸಿಕೊಂಡಿದ್ದಾರೆ. ಗಲಭೆ ನಿಯಂತ್ರಣ ಪಡೆಯೂ ಇಲ್ಲಿಗೆ ಆಗಮಿಸಿದೆ. ಸತತ ಎರಡನೇ ದಿನವೂ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ. ಮುಂಬಯಿನ ಬಾಂದ್ರಾ ಭಾಗದ ರೈಲ್ವೆ ವ್ಯಾಪ್ತಿಯಲ್ಲಿ ಇದುವರೆಗೆ ನಡೆದ ಅತ್ಯಂತ ದೊಡ್ಡ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಎಂದು ಇದನ್ನು ಪರಿಗಣಿಸಲಾಗಿದೆ. ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಬಾಂದ್ರಾದ ರೈಲು ನಿಲ್ದಾಣದ ಪರಿಸರದಲ್ಲಿನ ಕೊಳಚೆ ಪ್ರದೇಶದ ಅತಿಕ್ರಮಣದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದರು. ಆ ಬಳಿಕ ರೈಲ್ವೆಯು ಈ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯನ್ನು ಕೈಗೊಂಡಿದೆ.
🚨 Chaos in Garib Nagar,
Bandra, Mumbai during anti-encroachment driveStones were pelted at police while authorities were removing an illegal mosque structure.
The operation involved action against over 500 encroachment and slums.
A few days ago in Rajkot, Gujarat, action was… pic.twitter.com/0EvRtqM3th
— Sanatan Prabhat (@SanatanPrabhat) May 20, 2026
ಬಾಂದ್ರಾ ರೈಲ್ವೆ ವ್ಯಾಪ್ತಿಯಲ್ಲಿ ೫ ಸಾವಿರ ಚದರ ಮೀಟರ್ನಷ್ಟು ಅತಿಕ್ರಮಣವಾಗಿದೆ. ಇಲ್ಲಿ ೫೦೦ ಕ್ಕೂ ಹೆಚ್ಚು ಕೊಳೆಗೇರಿಗಳಿವೆ. ಕೆಲವು ದಿನಗಳ ಹಿಂದೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಾಗ ಅತಿಕ್ರಮಣಕಾರರು ಮುಂಬಯಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಇದಕ್ಕೆ ರಾಜಕೀಯ ಬೆಂಬಲವಿದ್ದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು; ಆದರೆ ಈಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಇನ್ನು ಕೆಲವು ದಿನಗಳ ಕಾಲ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
ರೈಲ್ವೆ ಅಧಿಕಾರಿಗಳ ನಿಲುವು !
ಈ ಪ್ರಕರಣದ ಕುರಿತು ರೈಲ್ವೆ ಅಧಿಕಾರಿಗಳು ಮಾತನಾಡಿ, ”ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಭವಿಷ್ಯದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅತಿಕ್ರಮಣ ತೆರವುಗೊಳಿಸುವುದು ಅತ್ಯಗತ್ಯವಾಗಿದೆ. ರೈಲ್ವೆ ಹಳಿಗಳ ಪಕ್ಕದಲ್ಲಿ ಬೆಳೆದಿರುವ ಕೊಳೆಗೇರಿಗಳಿಂದಾಗಿ ಅಪಘಾತದ ಅಪಾಯವೂ ಹೆಚ್ಚುತ್ತಿದೆ. ಸಂಬಂಧಪಟ್ಟ ಭೂಮಿ ಮುಕ್ತವಾದರೆ ‘ಬಾಂದ್ರಾ ಟರ್ಮಿನಸ್’ ವಿಸ್ತರಣೆ ಮಾಡಲು, ಹಾಗೂ ದೀರ್ಘ ದೂರದ ರೈಲುಗಳ ಸಾಮರ್ಥ್ಯವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಮತ್ತು ಭವಿಷ್ಯದಲ್ಲಿ ಬಾಂದ್ರಾ ರೈಲು ನಿಲ್ದಾಣವನ್ನು ‘ವರ್ಲ್ಡ್ ಕ್ಲಾಸ್ ಟರ್ಮಿನಸ್’ (ಜಾಗತಿಕ ದರ್ಜೆಯ ರೈಲು ನಿಲ್ದಾಣ) ಆಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಕಾರ್ಯಾಚರಣೆಯ ವ್ಯಾಪ್ತಿ !
ಮುಂಬಯಿ ಪೊಲೀಸರ ೪೦೦ ಅಧಿಕಾರಿಗಳು-ಸಿಬ್ಬಂದಿ, ರೈಲ್ವೆ ಪೊಲೀಸರು ಸೇರಿದಂತೆ ರೈಲ್ವೆ ಸುರಕ್ಷತಾ ಪಡೆಯ ೪೦೦ ಸೈನಿಕರು, ಹಾಗೆಯೇ ಪಶ್ಚಿಮ ರೈಲ್ವೆಯ ೨೦೦ ಪೊಲೀಸರು ಹೀಗೆ ಒಟ್ಟು ೧ ಸಾವಿರ ಜನರ ಸಶಸ್ತ್ರ ಪಡೆಯ ಸಮ್ಮುಖದಲ್ಲಿ ೧೨ ಜೆಸಿಬಿ, ಎರಡು ಪೊಕ್ಲೇನ್, ೧೨ ಟ್ರಕ್ ಮುಂತಾದ ಉಪಕರಣಗಳೊಂದಿಗೆ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಕಾರ್ಯಾಚರಣೆಯಿಂದಾಗಿ ೬೦೦ ಕೋಟಿ ರೂಪಾಯಿ ಮಾರುಕಟ್ಟೆ ಮೌಲ್ಯದ ಭೂಮಿ ಮತ್ತೆ ಪಶ್ಚಿಮ ರೈಲ್ವೆಯ ವಶಕ್ಕೆ ಬರಲಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ