ಸರಕಾರವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಆಘಾತ ಮಾಡಿದೆ ಎಂಬ ಆರೋಪ

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಸುವೇಂದು ಸರಕಾರದ ‘ಪಶ್ಚಿಮ ಬಂಗಾಲ ಪಶುವಧೆ ನಿಯಂತ್ರಣ ಅಧಿನಿಯಮ, ೧೯೫೦’ ಎಂಬ ಕಾಯ್ದೆಯನ್ನು ಜಾರಿಗೊಳಿಸುವ ಆದೇಶದ ವಿರುದ್ಧ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನ್ ವಾದಿ) ಲಿಬರೇಶನ್ ನ (ಸಿಪಿಐ-ಎಮ್ಎಲ್) ಬಂಗಾಲ ಶಾಖೆಯು ಕೊಲಕಾತಾ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ. ಅವರು ಇದರಲ್ಲಿ ‘ನ್ಯಾಯಾಲಯವು ತಕ್ಷಣವೇ ಹಸ್ತಕ್ಷೇಪ ಮಾಡಬೇಕು’ ಎಂದು ಬೇಡಿಕೆ ಇಟ್ಟಿದ್ದಾರೆ. ಸರಕಾರವು ಈ ಕಾಯ್ದೆಗನುಸಾರ ಗೋಹತ್ಯೆ ಮಾಡುವುದರ ಮೇಲೆ ನಿಷೇಧ ಹೇರಿದೆ.
ಅರ್ಜಿದಾರರು ಅರ್ಜಿಯಲ್ಲಿ, ಈ ಕಾಯ್ದೆಯನ್ನು ಜಾರಿಗೊಳಿಸುವುದು ಅಂದರೆ ಮುಸಲ್ಮಾನರ ಧಾರ್ಮಿಕ ಸ್ವಾತಂತ್ರ್ಯ, ಪಶು ವ್ಯಾಪಾರಕ್ಕೆ ಸಂಬಂಧಿಸಿದ (ಬಹುಪಾಲು ಹಿಂದೂ ಸಮುದಾಯದವರಾಗಿರುವ) ರೈತರ ಜೀವನೋಪಾಯ, ನಾಗರಿಕರ ತಮ್ಮ ಒಲವಿನ ಆಹಾರ ಸೇವಿಸುವ ಸ್ವಾತಂತ್ರ್ಯ ಮತ್ತು ಬಂಗಾಲದ ಆಹಾರ ಸಂಸ್ಕೃತಿಯ ವೈವಿಧ್ಯತೆಯ ಮೇಲೆ ಮಾಡಿದ ಆಕ್ರಮಣವಾಗಿದೆ ಎಂದು ದಾವೆ ಮಾಡಿದ್ದಾರೆ. ಈ ಕಾಯ್ದೆಯನ್ನು ಜಾರಿಗೊಳಿಸುವ ಹಿಂದಿನ ಉದ್ದೇಶವು ಪ್ರಾಣಿಗಳ ಬಲಿಯ ಮೇಲೆ ನಿಷೇಧ ಹೇರುವುದಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ