ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಭಾರತ
ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದ ಪಾಕಿಸ್ತಾನ

ನ್ಯೂಯಾರ್ಕ್ (ಅಮೆರಿಕ) – ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಪಾಕಿಸ್ತಾನಕ್ಕೆ ತೀಕ್ಷ್ಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿತು. ಮಂಡಳಿಯ ಚರ್ಚೆಯೊಂದರ ಅವಧಿಯಲ್ಲಿ ಪಾಕಿಸ್ತಾನವು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸುತ್ತಾ, ಭಾರತವು ಅದರ ಮೇಲೆ ಅನಧಿಕೃತ ನಿಯಂತ್ರಣ ಸಾಧಿಸಿದೆ ಮತ್ತು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಸಬೇಕು ಎಂದು ಹೇಳಿಕೆ ನೀಡಿದಾಗ, ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಪಾಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಾರತದ ಪ್ರತಿನಿಧಿ ಹರೀಶ ಪರ್ವತನೇನಿ ಅವರು ಮಾತನಾಡಿ, ನರಮೇಧದ ದೀರ್ಘಕಾಲದ ಕಳಂಕಿತ ಇತಿಹಾಸವಿರುವ ಪಾಕಿಸ್ತಾನವು ಭಾರತದ ಸಂಪೂರ್ಣ ಆಂತರಿಕ ವಿಷಯಗಳನ್ನು ಉಲ್ಲೇಖಿಸುವುದು ಒಂದು ದೊಡ್ಡ ವಿರೋಧಾಭಾಸವಾಗಿದ್ದು, ಅದಕ್ಕೆ ಹಾಗೆ ಮಾಡುವ ಯಾವುದೇ ಹಕ್ಕಿಲ್ಲ ಎಂದು ಹೇಳಿದರು.
ಪಾಕಿಸ್ತಾನವು ಈ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನದ ಮೇಲೆ ನಡೆಸಿದ ಭೀಕರ ಆಕ್ರಮಣಗಳ ಉಲ್ಲೇಖ ನೀಡುತ್ತಾ ಪರ್ವತನೇನಿ ಅವರು ಮುಂದುವರಿದು, ರಮಜಾನ್ ನಂತಹ ಪವಿತ್ರ ತಿಂಗಳಿನಲ್ಲಿ ಪಾಕಿಸ್ತಾನವು ಕಾಬೂಲ್ ಆಸ್ಪತ್ರೆಯೊಂದರ ಮೇಲೆ ಭೀಕರ ಆಕ್ರಮಣ ನಡೆಸಿತ್ತು. ಹಿಂಸಾಚಾರದ ಈ ಅಮಾನವೀಯ ಕೃತ್ಯದಲ್ಲಿ ೨೬೯ ನಾಗರಿಕರು ಸಾವನ್ನಪ್ಪಿದ್ದರು. ಈ ಘಟನೆಯು ಯಾವುದೇ ಸೈನಿಕ ಗುರಿ ಇಲ್ಲದ ಸ್ಥಳದಲ್ಲಿ ನಡೆದಿತ್ತು. ಇದನ್ನು ಯಾವುದೇ ಪರಿಸ್ಥಿತಿಯಲ್ಲೂ ಸಮರ್ಥಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಹೀಗಿರುವಾಗಲೂ ಅಂತರರಾಷ್ಟ್ರೀಯ ಕಾನೂನಿನ ನಿಯಮಗಳ ತತ್ವಗಳ ಭಾಷೆ ಮಾತನಾಡುವುದು ಪಾಕಿಸ್ತಾನದ ಬೂಟಾಟಿಕೆಯಾಗಿದೆ ಎಂದರು.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !