ವಾರಕರಿ ಸಂಪ್ರದಾಯದ ಸಂತರು ಮತ್ತು ಕೀರ್ತನಕಾರರನ್ನು ನುಸುಳುಕೋರರೆಂದು ಕರೆದ ಪ್ರಕರಣ

ಪುಣೆ – ಶರದ್ಚಂದ್ರ ಪವಾರ ಬಣದ ವಕ್ತಾರ ವಿಕಾಸ ಲವಾಂಡೆ ಅವರ ವಿರುದ್ಧ ವಾಘೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ, ಹೆಚ್ಚುವರಿ ಸತ್ರ ನ್ಯಾಯಾಲಯವು ಈ ಹಿಂದೆ ಮೇ ೨೦ ರವರೆಗೆ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಿರೀಕ್ಷಣಾ ಜಾಮೀನಿನ ಅರ್ಜಿಯಲ್ಲಿ ತಮ್ಮ ವಿರುದ್ಧ ಈ ಹಿಂದೆ ದಾಖಲಾಗಿದ್ದ ೪ ಅಪರಾಧ ಪ್ರಕರಣಗಳ ಮಾಹಿತಿಯನ್ನು ಲವಾಂಡೆ ಅವರು ಮುಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಸರಕಾರಿ ನ್ಯಾಯವಾದಿ ರಾಜೇಶ ಕಾವೇಡಿಯಾ ಅವರು ನ್ಯಾಯಾಲಯದಲ್ಲಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಲವಾಂಡೆ ಅವರಿಗೆ ನೀಡಲಾಗಿರುವ ರಕ್ಷಣೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯವು ಈ ವಾದವನ್ನು ಪುರಸ್ಕರಿಸಿ ಅವರ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿತು. ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಪೊಲೀಸರು ತಕ್ಷಣವೇ ಲವಾಂಡೆ ಅವರನ್ನು ಬಂಧಿಸಿದರು.
೧. ವಾರಕರಿ ಸಂಪ್ರದಾಯದಲ್ಲಿ ತಥಾಕಥಿತ ನುಸುಳುವಿಕೆ ನಡೆಯುತ್ತಿದೆ ಎಂದು ಆರೋಪಿಸಿ ವಿಕಾಸ ಲವಾಂಡೆ ಅವರು ೨೦ ಜನರ ಪಟ್ಟಿಯೊಂದನ್ನು ಪ್ರಕಟಿಸಿದ್ದರು. ಇದಕ್ಕೆ ವಾರಕರಿ ಸಂಪ್ರದಾಯದ ಸಂತರು ಮತ್ತು ಕೀರ್ತನಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅಲ್ಲಲ್ಲಿ ದೂರುಗಳನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಹಲವು ಕೀರ್ತನಕಾರರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ‘ರಾಷ್ಟ್ರೀಯ ವಾರಕರಿ ಸೇನೆ’ ಕೂಡ ಈ ಪ್ರಕರಣದಲ್ಲಿ ಲವಾಂಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಲವಾಂಡೆ ವಿರುದ್ಧ ವಾಘೋಲಿ ಮತ್ತು ಪಂಢರಪುರದಲ್ಲಿ ಪ್ರಕರಣಗಳು ದಾಖಲಾಗಿದ್ದವು.
೨. ವಾಘೋಲಿಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಕಾಸ ಲವಾಂಡೆ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯವು ತನಿಖಾಧಿಕಾರಿ, ಸರಕಾರಿ ಪಕ್ಷ ಮತ್ತು ವಾಘೋಲಿ ಪೊಲೀಸರಿಗೆ ಈ ಕುರಿತು ತಮ್ಮ ನಿಲುವನ್ನು ಮಂಡಿಸುವಂತೆ ನಿರ್ದೇಶನ ನೀಡಿತ್ತು. ಇದಾದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಲವಾಂಡೆ ಅವರು ತಮ್ಮ ವಿರುದ್ಧ ಈ ಹಿಂದೆ ದಾಖಲಾಗಿದ್ದ ಅಪರಾಧ ಪ್ರಕರಣಗಳನ್ನು ಮರೆಮಾಚಿರುವುದು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ