
ಮುಂಬಯಿ – ಇಲ್ಲಿನ ಹೆಸರಾಂತ ಶಿಕ್ಷಣ ಸಂಸ್ಥೆಯೊಂದರ ಪದವಿ ಪೂರ್ವ ಕಾಲೇಜಿನ (ಜೂನಿಯರ್ ಕಾಲೇಜ್) ತರಗತಿಗಳಿಗೆ ಮಂಜೂರಾತಿ ನೀಡಲು ಶಿಕ್ಷಣ ಉಪನಿರ್ದೇಶಕರ ಕಚೇರಿಯ ಹಿರಿಯ ಗುಮಾಸ್ತ ರಾಹುಲ್ ಶಿಂದೆ ಎಂಬಾತ ಒಂದೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿರೋಧಕ ದಳವು (ACB) ಆತನನ್ನು ಬಂಧಿಸಿದೆ.
ಎಲ್ಲಾ ನಿಯಮಗಳನ್ನು ಪಾಲಿಸಿದ್ದರೂ ಸಹ, ಹಿರಿಯ ಗುಮಾಸ್ತ ರಾಹುಲ್ ಶಿಂದೆ ತರಗತಿಗಳ ಮಂಜೂರಾತಿಯ ಕಡತವನ್ನು (ಫೈಲ್) ಮುಂದುವರಿಸದೆ ಬಾಕಿ ಉಳಿಸಿಕೊಂಡಿದ್ದನು. ನಿಯಮಾನುಸಾರ ಕೆಲಸ ಆಗಬೇಕಿದ್ದರೂ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ದೂರುದಾರರು ಲಂಚ ನೀಡದೆ ಭ್ರಷ್ಟಾಚಾರ ನಿರೋಧಕ ದಳಕ್ಕೆ ದೂರು ನೀಡಿದ್ದರು. ದೂರು ಬಂದ ತಕ್ಷಣವೇ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದರು. ಶಿಂದೆ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತೆ ಆತನನ್ನು ರೆಡ್ಹ್ಯಾಂಡ್ ಆಗಿ ಹಿಡಿಯಲಾಯಿತು. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ