ಹಿಂದೂ ಧಾರ್ಮ ಸ್ವೀಕರಿಸಿದ ಚರ್ಚ್ ಪಾದ್ರಿ!
ಜನರ ಕಾಲು ತೊಳೆದು ಹಿಂದೂ ಧರ್ಮಕ್ಕೆ ಸ್ವಾಗತ ಮಾಡಿದ ಭಾಜಪ ಶಾಸಕಿ ಭಾವನಾ ಬೋಹರಾ
(ಘರ್ ವಾಪಸಿ ಎಂದರೆ ಹಿಂದೂ ಧರ್ಮಕ್ಕೆ ಮರುಸೇರ್ಪಡೆ)

ರಾಯಪುರ (ಛತ್ತೀಸಗಢ) – ರಾಜ್ಯದ ಕವರ್ಧಾ ಜಿಲ್ಲೆಯ ಪಂಡರಿಯಾ ಭಾಗದಲ್ಲಿ ಸುಮಾರು 200 ಬಡ ಆದಿವಾಸಿಗಳು ಘರ್ ವಾಪಸಿ ಮಾಡಿದ್ದಾರೆ. ವಿಶೇಷವೆಂದರೆ, ಹಿಂದೂ ಧರ್ಮ ಸ್ವೀಕರಿಸಿದವರಲ್ಲಿ ಚರ್ಚ್ನ ಓರ್ವ ಪಾದ್ರಿ ಕೂಡ ಸೇರಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಂಡರಿಯಾದ ಭಾಜಪ ಶಾಸಕಿ ಭಾವನಾ ಬೋಹರಾ ಉಪಸ್ಥಿತರಿದ್ದರು. ಅವರು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಈ ಸಮಾರಂಭದಲ್ಲಿ ಆದಿವಾಸಿಗಳನ್ನು ಸನಾತನ ಧರ್ಮಕ್ಕೆ ಸ್ವಾಗತಿಸಿದರು. ಜನರ ಕಾಲುಗಳನ್ನು ತೊಳೆದು ಅವರಿಗೆ ಗೌರವ ಸಲ್ಲಿಸಿದರು.
ಶಾಸಕಿ ಬೋಹರಾ ಅವರು ಈ ಸಂದರ್ಭದಲ್ಲಿ ಮಾತನಾಡಿ, ಪಂಡರಿಯಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಜನರ ಸಹಾಯದಿಂದ ದೀರ್ಘಕಾಲದಿಂದ ಘರ್ ವಾಪಸಿ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಈ ಅಭಿಯಾನವನ್ನು ಆರಂಭಿಸಲಾಯಿತು. ಇದುವರೆಗೆ ಈ ಭಾಗದ ವಿವಿಧ ಗ್ರಾಮಗಳ ಸುಮಾರು 750 ಜನರು ಹಿಂದೂ ಧರ್ಮಕ್ಕೆ ಮರುಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.
ವಿವಿಧ ಗ್ರಾಮಗಳಿಂದ ಘರ್ ವಾಪಸಿ ಆದವರ ಸಂಖ್ಯೆ!
1. ನೇವುರ್ ಅರಣ್ಯ ಪ್ರದೇಶದ ಹತ್ತಿರದ ಗ್ರಾಮಗಳಿಂದ 115 ಜನರು
2. ಕುಯಿ-ಕುಕದುರ್ ಭಾಗದಿಂದ 70 ಜನರು
3. ದಮಗಡ ಗ್ರಾಮದಿಂದ 50 ಜನರು
4. ಕುಲ್ಹಿಡೋಂಗರಿ ಗ್ರಾಮದಿಂದ 140 ಜನರು.
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ