
ನವದೆಹಲಿ – ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿಗಳಿಂದ ಆಗುವ ಅಕ್ರಮ ವಲಸೆಯನ್ನು ಶಾಶ್ವತವಾಗಿ ತಡೆಯಲು ಕೇಂದ್ರ ಸರಕಾರವು ಶೀಘ್ರದಲ್ಲೇ ‘ಸ್ಮಾರ್ಟ್ ಬಾರ್ಡರ್ ಪ್ರಾಜೆಕ್ಟ್’ (ಸ್ಮಾರ್ಟ್ ಗಡಿ ಯೋಜನೆ) ಅನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಮಾಹಿತಿ ನೀಡಿದ್ದಾರೆ.
ಗಡಿ ಪ್ರದೇಶಗಳಲ್ಲಿ ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗೆ ಅವಕಾಶ ನೀಡುವುದಿಲ್ಲ!
ಗಡಿ ಭದ್ರತಾ ಪಡೆಯ (ಬಿಎಸ್ಎಫ್) ದೀಕ್ಷಾಂತ ಸಮಾರಂಭ ಮತ್ತು ‘ರುಸ್ತಮ್ಜೀ ಸ್ಮರಣಾರ್ಥ ಉಪನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಶಾಹ, ದೇಶದ ಭದ್ರತೆಯು ಇನ್ನು ಮುಂದೆ ಕೇವಲ ಸಾಂಪ್ರದಾಯಿಕ ವಿಧಾನಗಳ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ ಎಂದರು. ಅತ್ಯಾಧುನಿಕ ತಂತ್ರಜ್ಞಾನದ ನೆರವಿನೊಂದಿಗೆ ಭಾರತದ ಗಡಿಗಳನ್ನು ಸಂಪೂರ್ಣವಾಗಿ ‘ಅಭೇದ್ಯ’ ಗೊಳಿಸಲಾಗುವುದು. ‘ಸ್ಮಾರ್ಟ್ ಬಾರ್ಡರ್ ಪ್ರಾಜೆಕ್ಟ್’ ಅಡಿಯಲ್ಲಿ ಗಡಿಗಳಲ್ಲಿ ಡ್ರೋನ್ಗಳು, ಅತ್ಯಾಧುನಿಕ ರಾಡಾರ್ಗಳು, ಹೈಟೆಕ್ ಕ್ಯಾಮೆರಾಗಳು ಮತ್ತು ಇತರ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲಾಗುವುದು. ಈ ಯೋಜನೆ ಆರಂಭವಾದ ನಂತರ ಗಡಿ ಭದ್ರತಾ ಪಡೆಯ ಕೆಲಸ ಮತ್ತಷ್ಟು ಸುಲಭ, ನಿಖರ ಮತ್ತು ಬಲಿಷ್ಠವಾಗಲಿದೆ. ಕೇವಲ ಅಕ್ರಮ ವಲಸೆ ತಡೆಯುವುದು ಮಾತ್ರವಲ್ಲದೆ, ದೇಶದಲ್ಲಿ ಅಡಗಿರುವ ಪ್ರತಿಯೊಬ್ಬ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಸಂಕಲ್ಪ ಸರ್ಕಾರ ಮಾಡಿದೆ. ಗಡಿ ಪ್ರದೇಶಗಳಲ್ಲಿ ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗಳಿಗೆ ಅವಕಾಶ ನೀಡುವುದಿಲ್ಲ. ಅಕ್ರಮ ವಲಸೆಯ ಮೂಲಕ ಜನಸಂಖ್ಯೆಯನ್ನು ಬದಲಾಯಿಸಲು ನಡೆಯುತ್ತಿರುವ ಪಿತೂರಿಯನ್ನು ಗಡಿ ಭದ್ರತಾ ಪಡೆಯು ಹತ್ತಿಕ್ಕಬೇಕು. ಗಡಿ ಭದ್ರತೆಯು ಕೇವಲ ಒಂದು ಪಡೆಯ ಜವಾಬ್ದಾರಿಯಲ್ಲ, ಅದು ಇಡೀ ದೇಶದ ಪ್ರಾದೇಶಿಕ ಭದ್ರತೆಗೆ ಸಂಬಂಧಿಸಿದ್ದಾಗಿದೆ ಎಂದು ಶಾಹ ಹೇಳಿದರು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ