
ನವದೆಹಲಿ – ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿಗಳಿಂದ ಆಗುವ ಅಕ್ರಮ ವಲಸೆಯನ್ನು ಶಾಶ್ವತವಾಗಿ ತಡೆಯಲು ಕೇಂದ್ರ ಸರಕಾರವು ಶೀಘ್ರದಲ್ಲೇ ‘ಸ್ಮಾರ್ಟ್ ಬಾರ್ಡರ್ ಪ್ರಾಜೆಕ್ಟ್’ (ಸ್ಮಾರ್ಟ್ ಗಡಿ ಯೋಜನೆ) ಅನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಮಾಹಿತಿ ನೀಡಿದ್ದಾರೆ.
ಗಡಿ ಪ್ರದೇಶಗಳಲ್ಲಿ ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗೆ ಅವಕಾಶ ನೀಡುವುದಿಲ್ಲ!
ಗಡಿ ಭದ್ರತಾ ಪಡೆಯ (ಬಿಎಸ್ಎಫ್) ದೀಕ್ಷಾಂತ ಸಮಾರಂಭ ಮತ್ತು ‘ರುಸ್ತಮ್ಜೀ ಸ್ಮರಣಾರ್ಥ ಉಪನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಶಾಹ, ದೇಶದ ಭದ್ರತೆಯು ಇನ್ನು ಮುಂದೆ ಕೇವಲ ಸಾಂಪ್ರದಾಯಿಕ ವಿಧಾನಗಳ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ ಎಂದರು. ಅತ್ಯಾಧುನಿಕ ತಂತ್ರಜ್ಞಾನದ ನೆರವಿನೊಂದಿಗೆ ಭಾರತದ ಗಡಿಗಳನ್ನು ಸಂಪೂರ್ಣವಾಗಿ ‘ಅಭೇದ್ಯ’ ಗೊಳಿಸಲಾಗುವುದು. ‘ಸ್ಮಾರ್ಟ್ ಬಾರ್ಡರ್ ಪ್ರಾಜೆಕ್ಟ್’ ಅಡಿಯಲ್ಲಿ ಗಡಿಗಳಲ್ಲಿ ಡ್ರೋನ್ಗಳು, ಅತ್ಯಾಧುನಿಕ ರಾಡಾರ್ಗಳು, ಹೈಟೆಕ್ ಕ್ಯಾಮೆರಾಗಳು ಮತ್ತು ಇತರ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲಾಗುವುದು. ಈ ಯೋಜನೆ ಆರಂಭವಾದ ನಂತರ ಗಡಿ ಭದ್ರತಾ ಪಡೆಯ ಕೆಲಸ ಮತ್ತಷ್ಟು ಸುಲಭ, ನಿಖರ ಮತ್ತು ಬಲಿಷ್ಠವಾಗಲಿದೆ. ಕೇವಲ ಅಕ್ರಮ ವಲಸೆ ತಡೆಯುವುದು ಮಾತ್ರವಲ್ಲದೆ, ದೇಶದಲ್ಲಿ ಅಡಗಿರುವ ಪ್ರತಿಯೊಬ್ಬ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಸಂಕಲ್ಪ ಸರ್ಕಾರ ಮಾಡಿದೆ. ಗಡಿ ಪ್ರದೇಶಗಳಲ್ಲಿ ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗಳಿಗೆ ಅವಕಾಶ ನೀಡುವುದಿಲ್ಲ. ಅಕ್ರಮ ವಲಸೆಯ ಮೂಲಕ ಜನಸಂಖ್ಯೆಯನ್ನು ಬದಲಾಯಿಸಲು ನಡೆಯುತ್ತಿರುವ ಪಿತೂರಿಯನ್ನು ಗಡಿ ಭದ್ರತಾ ಪಡೆಯು ಹತ್ತಿಕ್ಕಬೇಕು. ಗಡಿ ಭದ್ರತೆಯು ಕೇವಲ ಒಂದು ಪಡೆಯ ಜವಾಬ್ದಾರಿಯಲ್ಲ, ಅದು ಇಡೀ ದೇಶದ ಪ್ರಾದೇಶಿಕ ಭದ್ರತೆಗೆ ಸಂಬಂಧಿಸಿದ್ದಾಗಿದೆ ಎಂದು ಶಾಹ ಹೇಳಿದರು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡಿ! – ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ದಿಂದ ಅಂಚೆ ಕಚೇರಿಗೆ ಆದೇಶ : Postal Parcel Stolen
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim