ವಿಶ್ವ ಆರೋಗ್ಯ ಸಂಸ್ಥೆಯಿಂದ ಒಂದು ವಾರದ ಹಿಂದಷ್ಟೇ ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಘೋಷಣೆ

ನವದೆಹಲಿ – ಕೊರೋನಾ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಜಾಗತಿಕ ಆರೋಗ್ಯ ಸಂಸ್ಥೆಯು ಮೇ 17 ರಂದು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ಯನ್ನು ಘೋಷಿಸಿದೆ. ಆಫ್ರಿಕನ್ ದೇಶಗಳಲ್ಲಿ ‘ಇಬೋಲಾ’ ಸಾಂಕ್ರಾಮಿಕ ರೋಗವು ಅತ್ಯಂತ ವೇಗವಾಗಿ ಹರಡುತ್ತಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಈ ಸಂಕಟವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರಕಾರವೂ ಸಹ ಮುನ್ನೆಚ್ಚರಿಕೆ ನೀಡಿ ಜಾಗರೂಕರಾಗಿರಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಾಂಗೋ ಮತ್ತು ಉಗಾಂಡಾ ಈ ಆಫ್ರಿಕನ್ ದೇಶಗಳಲ್ಲಿ ಇಬೋಲಾ ಸೋಂಕು ವೇಗವಾಗಿ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ‘ಆಫ್ರಿಕಾ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆನ್ಷನ್’ ಸಂಸ್ಥೆಯು ಇಬೋಲಾ ಕುರಿತು ಗಂಭೀರ ಎಚ್ಚರಿಕೆಯನ್ನು ನೀಡಿದೆ.
ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ನಂತಹ ಆಫ್ರಿಕನ್ ದೇಶಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಿ! – ಭಾರತದ ನಾಗರಿಕರಿಗೆ ಕರೆ
ಭಾರತದ ಆರೋಗ್ಯ ಸಚಿವಾಲಯವು ಭಾರತೀಯ ನಾಗರಿಕರಿಗೆ ವಿದೇಶಿ ಪ್ರಯಾಣದ ಕುರಿತು ಸೂಚನೆಗಳನ್ನು ನೀಡುತ್ತಾ, ನೀವು ಬೇರೆ ದೇಶಗಳಿಗೆ ಪ್ರಯಾಣಿಸುತ್ತಿದ್ದರೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ. ನಾಗರಿಕರು ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ನಂತಹ ಆಫ್ರಿಕನ್ ದೇಶಗಳಿಗೆ ಪ್ರಯಾಣಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಆ ದೇಶಗಳಲ್ಲಿ ಪರಿಸ್ಥಿತಿ ತಿಳಿಯಾಗುವವರೆಗೆ ಅಗತ್ಯವಿದ್ದ ಹೊರತು ಅಲ್ಲಿಗೆ ಪ್ರಯಾಣಿಸಬಾರದು. ಪ್ರಸ್ತುತ ಯಾರು ಆ ದೇಶಗಳಲ್ಲಿದ್ದಾರೋ ಅಥವಾ ಅಲ್ಲಿಂದ ಕೆಲವು ಜನರು ಅತ್ಯಗತ್ಯ ಕೆಲಸಗಳಿಗಾಗಿ ಭಾರತಕ್ಕೆ ಬರುತ್ತಿದ್ದಾರೋ, ಅವರು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಎಂದು ಸರ್ಕಾರ ತಿಳಿಸಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ