ಮುಖ್ಯಮಂತ್ರಿ ಜೋಸೆಫ್ ವಿಜಯರವರ ಆದೇಶದ ನಂತರ ಕೇವಲ ೩ ದಿನಗಳಲ್ಲಿ ವ್ಯಾಪಕ ಕಾರ್ಯಾಚರಣೆ
೧ ಕೋಟಿ ೪೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳೂ ಜಪ್ತು !

ಚೆನ್ನೈ (ತಮಿಳುನಾಡು) – ಮಾದಕ ವಸ್ತು ಕಳ್ಳಸಾಗಾಣಿಕೆದಾರರ ವಿರುದ್ಧ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಜೋಸೆಫ್ ವಿಜಯರವರು ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ತಮಿಳುನಾಡು ಪೊಲೀಸರು ಕೇವಲ ೩ ದಿನಗಳಲ್ಲಿ ೩ ಸಾವಿರ ೨೪೬ ಅಪರಾಧಿಗಳು, ಹಾಗೂ ೪೧೯ ಮಾದಕ ವಸ್ತು ಕಳ್ಳಸಾಗಾಣಿಕೆದಾರರನ್ನು ಬಂಧಿಸಿದ್ದಾರೆ. ಈ ವಿಶೇಷ ಅಭಿಯಾನದಲ್ಲಿ ೧೫ ಸಾವಿರ ೩೪೯ ಜನರನ್ನು ತಪಾಸಣೆಗೊಳಪಡಿಸಲಾಗಿತ್ತು. ಇದರಲ್ಲಿ ೧೨ ಸಾವಿರ ೬೫೦ ಕುಖ್ಯಾತ ಅಪರಾಧಿಗಳು ಒಳಗೊಂಡಿದ್ದರು. ಇವರ ಪೈಕಿ ೩ ಸಾವಿರ ೨೪೬ ಜನರನ್ನು ಮುಂದಿನ ವಿಚಾರಣೆಗಾಗಿ ಬಂಧಿಸಲಾಗಿದೆ.
ಮಾದಕ ವಸ್ತು ಕಾಯ್ದೆಯಡಿ ಮಾದಕ ವಸ್ತುಗಳ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರು ೨೯೪ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ೨೬೮ ಕಿಲೋಗ್ರಾಂ ಗಾಂಜಾ ಮತ್ತು ೨ ಸಾವಿರದ ೪೭೬ ಅಮಲು ಮಾತ್ರೆಗಳನ್ನು ಜಪ್ತು ಮಾಡಲಾಗಿದೆ. ಇವುಗಳ ಅಂದಾಜು ಮೌಲ್ಯ ೧ ಕೋಟಿ ೪೩ ಲಕ್ಷ ರೂಪಾಯಿ ಎಂದು ಹೇಳಲಾಗಿದೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ೪೮ ಗಂಟೆಗಳ ಒಳಗಾಗಿ ಜೋಸೆಫ್ ವಿಜಯರವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇದರಲ್ಲಿಯೇ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಸುಮಾರು ೬೫ ಮಾದಕ ವಸ್ತು ವಿರೋಧಿ ಕಾರ್ಯಪಡೆಗಳನ್ನು ಸ್ಥಾಪಿಸುವ ಮಹತ್ವದ ನಿರ್ಧಾರವೂ ಒಳಗೊಂಡಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ