‘ಕಾಕ್ರೋಚ್ ಜನತಾ ಪಾರ್ಟಿ’ ಅಭಿಯಾನದ ವಿರುದ್ಧದ ಅರ್ಜಿಯ ಕುರಿತು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆ !

ನವ ದೆಹಲಿ – ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ, ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು ಸ್ಥಾಪಿಸಿ ನ್ಯಾಯಾಲಯದ ಹೆಸರನ್ನು ಅನಗತ್ಯವಾಗಿ ಕೆಡಿಸಲಾಗುತ್ತಿದೆ ಎಂದು ವಾದಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಲಾಗಿತ್ತು. ಆದರೆ, ನ್ಯಾಯಾಲಯವು ಈ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ. ‘ಈ ವಿಷಯವನ್ನು ಅಷ್ಟೊಂದು ಭಾವನಾತ್ಮಕವಾಗಿ ನೋಡಬೇಡಿ’, ಎಂದು ಮುಖ್ಯ ನ್ಯಾಯಮೂರ್ತಿಗಳು ನ್ಯಾಯವಾದಿಗಳಿಗೆ ಸಲಹೆ ನೀಡಿದರು.
ಮೇ ೧೫ ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನ್ಯಾಯಾಂಗ ವ್ಯವಸ್ಥೆಯ ಮೇಲೆ ಕೆಸರು ಎರಚಾಟ ನಡೆಸುವ ಪ್ರವೃತ್ತಿಗಳ ವಿರುದ್ಧ ಕಠಿಣ ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದರು. ಅವರು, ಸಮಾಜದಲ್ಲಿ ಇಂತಹ ಕೆಲವು ಪರಾವಲಂಬಿಗಳಿದ್ದಾರೆ, ಅವರು ನಿರಂತರವಾಗಿ ವ್ಯವಸ್ಥೆಯ ಮೇಲೆ ದಾಳಿ ನಡೆಸುತ್ತಿರುತ್ತಾರೆ. ನಿಮಗೆ ಅವರದ್ದೇ ಪಂಕ್ತಿಯಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಿದೆಯೇ ? ಕೆಲವು ಯುವಕರು ಕಾಕ್ರೋಚ್ ಗಳಂತೆ (ಜಿರಳೆಗಳಂತೆ) ಇರುತ್ತಾರೆ, ಅವರಿಗೆ ಕಾನೂನು ಕ್ಷೇತ್ರದಲ್ಲಿ ಅಥವಾ ಬೇರೆಲ್ಲೂ ಕೆಲಸ ಸಿಗುವುದಿಲ್ಲ; ನಂತರ ಅಂತಹ ಜನರು ಪತ್ರಿಕೋದ್ಯಮ, ಸಾಮಾಜಿಕ ಜಾಲತಾಣ ಅಥವಾ ಮಾಹಿತಿ ಹಕ್ಕು ಕಾರ್ಯಕರ್ತರಾಗುತ್ತಾರೆ ಮತ್ತು ಎಲ್ಲರ ಮೇಲೆಯೂ ಕೆಸರು ಎರಚಲು ಮಾಡಲು ಪ್ರಾರಂಭಿಸುತ್ತಾರೆ,” ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ