ಎಲ್ಲಾ ಜಿಲ್ಲೆಗಳಿಗೂ ಅಗತ್ಯ ಕ್ರಮ ಕೈಗೊಳ್ಳಲು ಬಂಗಾಳ ಸರಕಾರದ ಆದೇಶ

ಕೊಲಕಾತಾ (ಬಂಗಾಳ) – ಬಂಗಾಳದ ಭಾಜಪ ಸರಕಾರವು ಕಾನೂನುಬಾಹಿರವಾಗಿ ವಾಸಿಸುತ್ತಿರುವ ವಿದೇಶಿ ನಾಗರಿಕರಿಗಾಗಿ ತಾತ್ಕಾಲಿಕ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಎಲ್ಲಾ ಜಿಲ್ಲೆಗಳಿಗೆ ನಿರ್ದೇಶನ ನೀಡಿದೆ. ಸಂಬಂಧಪಟ್ಟ ನಾಗರಿಕರ ಗಡಿಪಾರು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಇರಿಸಲು ಈ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಗೃಹ ಇಲಾಖೆಯು ಆದೇಶಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಳೆದ ವರ್ಷ ಮೇ ತಿಂಗಳಿನಲ್ಲಿ ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ವಶಕ್ಕೆ ಪಡೆದ ಶಂಕಿತರ ದಾಖಲೆಗಳ ಪರಿಶೀಲನೆ ನಡೆಯುವವರೆಗೆ ಅವರನ್ನು ಇಲ್ಲಿ ೩೦ ದಿನಗಳವರೆಗೆ ಇರಿಸಬಹುದು. ಪೌರತ್ವ ನಿರ್ಧಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಜಿಲ್ಲಾಧಿಕಾರಿಗಳು ಅಥವಾ ಆ ಹುದ್ದೆಯ ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ