ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುವಾಗ ಮಹಿಳಾ ಪೊಲೀಸ್ ಮಹಾನಿರೀಕ್ಷಕರು ನಗುತ್ತಿದ್ದರಿಂದ ಆಕ್ರೋಶ

ಕೊಯಂಬತ್ತೂರು (ತಮಿಳುನಾಡು) – ಇಲ್ಲಿನ ಸೂಲೂರು ಪರಿಸರದಲ್ಲಿ ಓರ್ವ ೧೦ ವರ್ಷದ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರಗೈದು ಆಕೆಯ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮನೆಯ ಹತ್ತಿರ ಕಿರಾಣಿ ಸಾಮಾನು ತರಲು ಹೋಗಿದ್ದ ಬಾಲಕಿಯು ಊರ ಹೊರಗಿನ ಕೆರೆಯ ಬಳಿ ಮೃತಾವಸ್ಥೆಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರತಿಕ್ರಿಯೆ ನೀಡುತ್ತಾ, ಇದು ದುಃಖದ ಘಟನೆಯಾಗಿದೆ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಕೊಯಂಬತ್ತೂರು ಪಶ್ಚಿಮ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ಆರ್.ವಿ. ರಮ್ಯಾ ಭಾರತಿಯವರು ಮಾಹಿತಿ ನೀಡಿದರು. ಇಂತಹ ಗಂಭೀರ ಘಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸುವಾಗ ಈ ಮಹಿಳಾ ಪೊಲೀಸ್ ಅಧಿಕಾರಿಯು ಯಾವುದೋ ಆನಂದೋತ್ಸವದ ಕಾರ್ಯಕ್ರಮಕ್ಕೆ ಬಂದಂತೆ ನಗುತ್ತಾ ಸಮಯ ಕಳೆದರು. ರಮ್ಯಾ ಭಾರತಿಯವರ ಈ ವರ್ತನೆ ಚಿತ್ರೀಕರಣಗೊಂಡು ಪ್ರಸಾರವಾದ ನಂತರ ಇಂತಹ ಅಸಮರ್ಥ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಿ, ಎಂದು ಅಸಮಾಧಾನಗೊಂಡ ಜನರು ಒತ್ತಾಯಿಸಿದ್ದಾರೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ