‘ಜಮಾತ್-ಎ-ಇಸ್ಲಾಮಿ’ ಮುಖ್ಯಸ್ಥನ ಮನೆಯ ಮೇಲೂ ದಾಳಿ !

ಶ್ರೀನಗರ (ಜಮ್ಮು-ಕಾಶ್ಮೀರ) – ರಾಷ್ಟ್ರೀಯ ತನಿಖಾ ಸಂಸ್ಥೆಯು ಮೇ ೨೫ ರಂದು ‘ಜಮಾತ್-ಎ-ಇಸ್ಲಾಮಿ’ಗೆ ಸಂಬಂಧಿಸಿದ ಭಯೋತ್ಪಾದನಾ ಆರ್ಥಿಕ ನೆರವು ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಅನೇಕ ಭಾಗಗಳಲ್ಲಿ ದಾಳಿ ನಡೆಸಿತು. ಶೋಪಿಯಾನ್ ಮತ್ತು ಶ್ರೀನಗರದ ೩ ಸ್ಥಳಗಳಲ್ಲಿ ನಡೆಸಿದ ಈ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದನಾ ಆರ್ಥಿಕ ನೆರವಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಡಿಜಿಟಲ್ ಉಪಕರಣಗಳನ್ನು ಜಪ್ತಿ ಮಾಡಲಾಯಿತು. ಶೋಪಿಯಾನ್ನಲ್ಲಿ ‘ಭಯೋತ್ಪಾದಕರ ಅಡ್ಡೆ’ಯಾಗಿದ್ದ ‘ದಾರುಲ್-ಉಲೂಮ್-ಸಿರಾಜುಲ್-ಉಲೂಮ್’ ಎಂಬ ಮದರಸಾದ ಮೇಲೆ ದಾಳಿ ನಡೆಸಲಾಯಿತು. ‘ಜಮಾತ್-ಎ-ಇಸ್ಲಾಮಿ’ ಮುಖ್ಯಸ್ಥ ಶಹಜಾದಾ ಔರಂಗಜೇಬ್ ಅವನ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದರು. ಹಾಗೆಯೇ ಶ್ರೀನಗರದಲ್ಲಿನ ‘ಜಮಿಯತ್-ಉಲ್-ಬನಾತ್’ ಎಂಬ ಹುಡುಗಿಯರ ಮದರಸಾದ ಮೇಲೂ ದಾಳಿ ನಡೆಸಲಾಯಿತು.
ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ ‘ಜಮಾತ್-ಎ-ಇಸ್ಲಾಮಿ’ ಮೇಲೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದು, ಪ್ರತ್ಯೇಕತಾವಾದಿ ವಿಚಾರಧಾರೆಯನ್ನು ಬೆಂಬಲಿಸುವುದು ಮತ್ತು ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಮುಂತಾದ ಆರೋಪಗಳಿವೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ