ಬಂಗಾಲ ರಾಜ್ಯದಲ್ಲಿ ಸರಕಾರಿ ಕ್ಯಾಂಟೀನ್‌ಗಳಲ್ಲಿ ಇನ್ನು ಮುಂದೆ ೫ ರೂಪಾಯಿಗೆ ಸಿಗಲಿದೆ ‘ಮೀನು-ಊಟ’ ! : Fish Lunch Bengal

ಬಂಗಾಳದ ಮುಖ್ಯಮಂತ್ರಿಗಳ ಘೋಷಣೆ

ಮುಖ್ಯಮಂತ್ರಿ ಶುಭೇಂದು ಅಧಿಕಾರಿ

ಕೊಲಕಾತಾ (ಬಂಗಾಳ) – ರಾಜ್ಯದ ಸರಕಾರಿ ಕ್ಯಾಂಟೀನ್‌ಗಳಲ್ಲಿ ಜನರಿಗೆ ಕೇವಲ ೫ ರೂಪಾಯಿಗೆ ‘ಮೀನು-ಊಟ’ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರು ಘೋಷಿಸಿದ್ದಾರೆ. ಸಾಮಾನ್ಯ ಜನರಿಗೆ ಮತ್ತು ಅಗತ್ಯವಿರುವವರಿಗೆ ಕೈಗೆಟುಕುವ ದರದಲ್ಲಿ ಆಹಾರವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಾಗೆಯೇ ಇಡೀ ಬಂಗಾಳದಲ್ಲಿ ವಿಶೇಷ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು, ಅಲ್ಲಿ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ದೊರೆಯಲಿದೆ ಎಂಬ ಮಾಹಿತಿಯನ್ನೂ ಅವರು ನೀಡಿದ್ದಾರೆ.