ದೆಹಲಿಯಲ್ಲಿ ಜರುಗಿದ ‘ಕ್ವಾಡ್’ ದೇಶಗಳ ವಿದೇಶಾಂಗ ಸಚಿವರ ಸಭೆ
(ಕ್ವಾಡ್ ದೇಶಗಳೆಂದರೆ ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್. ಈ ೪ ದೇಶಗಳ ಒಕ್ಕೂಟವನ್ನು ಅಮೆರಿಕವು ಪ್ರಮುಖವಾಗಿ ಈ ವಲಯದಲ್ಲಿ ಚೀನಾದ ಪ್ರಾಬಲ್ಯವನ್ನು ಕಡಿಮೆ ಮಾಡಲು ರಚಿಸಿದೆ.)

ನವದೆಹಲಿ – ಇರಾನ್ನಿಂದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದು ಇಂಧನ ಭದ್ರತೆಯ ಮೇಲೆ ಸ್ಪಷ್ಟವಾಗಿ ಪರಿಣಾಮ ಬೀರುತ್ತಿದೆ. ಸಮುದ್ರ ಮಾರ್ಗಗಳ ಸ್ವಾತಂತ್ರ್ಯವನ್ನು ಕಾಪಾಡುವುದು ಅಗತ್ಯವಾಗಿದೆ ಮತ್ತು ‘ಕ್ವಾಡ್’ ದೇಶಗಳು ಯಾವುದೇ ರೀತಿಯ ಟೋಲ್ ವಿಧಿಸುವುದನ್ನು ವಿರೋಧಿಸುತ್ತವೆ. ಕ್ವಾಡ್ ಸದಸ್ಯ ದೇಶಗಳು ಕೇವಲ ಚರ್ಚೆಯ ಮೇಲಷ್ಟೇ ಅಲ್ಲದೆ, ಖಚಿತ ನಿರ್ಣಯಗಳತ್ತ ಗಮನ ಹರಿಸುತ್ತಿವೆ ಎಂಬ ವಿಷಯವನ್ನು ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರು ಇಲ್ಲಿ ನಡೆದ ಕ್ವಾಡ್ ದೇಶಗಳ ವಿದೇಶಾಂಗ ಸಚಿವರ ಸಭೆಯ ನಂತರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ವಿದೇಶಾಂಗ ಸಚಿವರು ಭಾಗವಹಿಸಿದ್ದರು. ಅಮೆರಿಕದಿಂದ ಮಾರ್ಕೊ ರುಬಿಯೋ, ಜಪಾನ್ನಿಂದ ತೋಷಿಮಿತ್ಸು ಮೊತೇಗಿ ಮತ್ತು ಆಸ್ಟ್ರೇಲಿಯಾದಿಂದ ಪೆನ್ನಿ ವಾಂಗ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಭಯೋತ್ಪಾದನೆಯ ವಿಷಯದ ಕುರಿತು ಮಾತನಾಡುತ್ತಾ, ಇದರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕು. ಯಾವ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳು ನಡೆಯುತ್ತವೆಯೋ, ಅವುಗಳಿಗೆ ತಮ್ಮ ರಕ್ಷಣೆಯ ಹಕ್ಕಿದೆ ಎಂದು ಹೇಳಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine