ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆ: UCC in Assam

ಗೌಹಾತಿ (ಅಸ್ಸಾಂ) – ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮೇ ೨೫ ರಂದು ಮಂಡಿಸಲಾಗಿದೆ. ಈ ವಿಧೇಯಕದ ಕುರಿತು ಮೇ ೨೭ ರಂದು ಚರ್ಚೆ ನಡೆಯಲಿದೆ. ಒಂದು ವೇಳೆ ಈ ವಿಧೇಯಕವು ಅಂಗೀಕಾರಗೊಂಡರೆ, ಅಸ್ಸಾಂ ಈ ಕಾನೂನನ್ನು ಜಾರಿಗೆ ತಂದ ದೇಶದ ಮೂರನೇ ರಾಜ್ಯವಾಗಲಿದೆ. ಇದಕ್ಕೂ ಮುನ್ನ ಉತ್ತರಾಖಂಡ ಮತ್ತು ಗುಜರಾತ್ ರಾಜ್ಯಗಳು ಈ ಕಾನೂನನ್ನು ಅಂಗೀಕರಿಸಿವೆ. ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾನೂನು ಜಾರಿಯಲ್ಲಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಪ್ರಕಾರ, ಪರಿಶಿಷ್ಟ ಪಂಗಡಗಳು (ಬೆಟ್ಟಗಾಡು) ಮತ್ತು ಪರಿಶಿಷ್ಟ ಪಂಗಡಗಳು (ಮೈದಾನ ಪ್ರದೇಶ) ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿರುತ್ತವೆ. ಅಲ್ಲದೆ ಸಾಂಪ್ರದಾಯಿಕ ಧಾರ್ಮಿಕ ವಿಧಿಗಳು, ಸಂಪ್ರದಾಯಗಳು ಮತ್ತು ಆಚರಣೆಗಳಿಗೂ ಇದರಿಂದ ವಿನಾಯಿತಿ ನೀಡಲಾಗುವುದು.