ಉತ್ತರಾಖಂಡ: ‘ಲವ್ ಜಿಹಾದ್’ನ ಹೊಸ ಪ್ರಕರಣ ಬೆಳಕಿಗೆ !

ಡೆಹರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ತ್ಯುನಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಹೆಸರಿನ ನಕಲಿ ಗುರುತು ಸೃಷ್ಟಿಸಿ, ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅನಾಸ್ ಹೆಸರಿನ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ‘ಅಂಶ ರಾಣಾ’ ಹೆಸರಿನ ‘ಇನ್ ಸ್ಟಾಗ್ರಾಮ್’ ಖಾತೆಯ ಮೂಲಕ ೧೬ ವರ್ಷದ ಹಿಂದೂ ಯುವತಿಯನ್ನು ಪ್ರೇಮದ ಜಾಲಕ್ಕೆ ಸೆಳೆದಿದ್ದನು. ನಂತರ ಹೋಟೆಲ್ ಗೆ ಕರೆದೊಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಿದನು. ಈ ಪ್ರಕರಣದಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿ ಮಹಮ್ಮದ್ ಜುನೇದ್ ಎಂಬಾತ ಆರೋಪಿಗೆ ಸಹಾಯ ಮಾಡಿದ್ದು, ಯಾವುದೇ ಗುರುತಿನ ಚೀಟಿ ಇಲ್ಲದೆಯೇ ಹೋಟೆಲ್ ನಲ್ಲಿ ಕೋಣೆ ಸಿಗುವಂತೆ ಮಾಡಿಕೊಟ್ಟಿದ್ದನು.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜನರು ಮತ್ತು ರುದ್ರಸೇನಾ ದೇವಭೂಮಿ ಸಂಘಟನೆಯ ಕಾರ್ಯಕರ್ತರಲ್ಲಿ ಆಕ್ರೋಶದ ಅಲೆ ಎಬ್ಬಿದೆ. ಈ ಘಟನೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ತ್ಯುನಿಯ ಮುಖ್ಯ ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದರು. ಸಿಟ್ಟಿಗೆದ್ದ ನಾಗರಿಕರು ರಸ್ತೆಗಿಳಿದು ಘೋಷಣೆಗಳನ್ನು ಕೂಗಿದರು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!