‘ನಾನು ಇಂತಹ ಕೊಳಕು ಧರ್ಮವನ್ನು ನಂಬುವುದಿಲ್ಲ’, ಎಂದು ಸನಾತನ ಧರ್ಮದ ವಿರುದ್ಧ ಟಿಪ್ಪಣಿ ಮಾಡಿದ ಪ್ರಕರಣ

ಕೋಲಕಾತಾ (ಬಂಗಾಳ) – ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸಿಲಿಗುಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅವರು ವರ್ಷ ೨೦25 ರಲ್ಲಿ ಕೋಲಕಾತಾದಲ್ಲಿ ಈದ್ ನಿಮಿತ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮವನ್ನು ‘ಕೊಳಕು ಧರ್ಮ’ ಎಂದು ಕರೆದಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಮುಗಳ ಅಡಿಯಲ್ಲಿ ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
೧. ಮಮತಾ ಬ್ಯಾನರ್ಜಿ ಅವರ ವಿರುದ್ಧ ದೂರು ದಾಖಲಾದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ೧ ವಿಡಿಯೋ ಪ್ರಸಾರವಾಗುತ್ತಿದೆ. ಇದರಲ್ಲಿ ಅವರು, ‘ಒಂದು ಕೊಳಕು ಧರ್ಮ, ಇದನ್ನು ‘ಜುಮ್ಲಾ (ಸುಳ್ಳು ಭರವಸೆ ನೀಡುವುದು) ಪಾರ್ಟಿ’ಯು ತಯಾರಿಸಿದೆ, ನಾವು ಅದನ್ನು ನಂಬುವುದಿಲ್ಲ’ ಎಂದು ಹೇಳುತ್ತಿದ್ದಾರೆ. (ಹಾಗಾದರೆ ಇಂತಹ ಧರ್ಮದಲ್ಲಿ ಮಮತಾ ಬ್ಯಾನರ್ಜಿ ಏಕೆ ಇದ್ದಾರೆ ? ಅವರು ಇದುವರೆಗೆ ಬೇರೆ ಧರ್ಮವನ್ನು ಏಕೆ ಸ್ವೀಕರಿಸಲಿಲ್ಲ ?, ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ ! – ಸಂಪಾದಕರು)
೨. ನ್ಯಾಯವಾದಿ ರಿಂಕಿ ಚಟರ್ಜಿ ಸಿಂಗ್ ಅವರು ಮಮತಾ ಬ್ಯಾನರ್ಜಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹೇಳಿಕೆಯಿಂದ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಈ ದೂರಿನಲ್ಲಿ ಹೇಳಲಾಗಿದೆ. ತೃಣಮೂಲ ಕಾಂಗ್ರೆಸ್ನ ಕೆಲವು ನಾಯಕರು ಈ ಹಿಂದೆಯೂ ಹಿಂದೂ ಧರ್ಮದ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಈ ದೂರಿನಲ್ಲಿ ಆರೋಪಿಸಲಾಗಿದೆ.
೩. ತಾವು ವರ್ಷ ೨0೨೫ ರಲ್ಲೂ ದೂರು ದಾಖಲಿಸಲು ಪ್ರಯತ್ನಿಸಿದ್ದೆವು; ಆದರೆ ಆ ಸಮಯದಲ್ಲಿ ತಮ್ಮ ಮಾತನ್ನು ಕೇಳಿಸಿಕೊಳ್ಳಲಿಲ್ಲ ಮತ್ತು ತಮಗೆ ಕಿರುಕುಳವನ್ನು ಎದುರಿಸಬೇಕಾಯಿತು ಎಂದು ರಿಂಕಿ ಚಟರ್ಜಿ ಸಿಂಗ್ ದಾವೆ ಮಾಡಿದ್ದಾರೆ.
೪. ತೃಣಮೂಲ ಕಾಂಗ್ರೆಸ್ನ ಡಾರ್ಜಿಲಿಂಗ್ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಅತ್ರಿ ಶರ್ಮಾ ಅವರೂ ಸಹ ಈ ಹೇಳಿಕೆಯು ಅಯೋಗ್ಯವಾಗಿದೆ ಎಂದು ಹೇಳಿದ್ದಾರೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ