
ನವ ದೆಹಲಿ – ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಮತ್ತು ಅತ್ಯಂತ ಪ್ರಮುಖ ಅಂಗಗಳಾಗಿವೆ ಎಂದು ಭಾರತವು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರ ಚೀನಾ ಪ್ರವಾಸದ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ಪಾಕಿಸ್ತಾನವು ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಚೀನಾಕ್ಕೆ ಮಾಹಿತಿ ನೀಡಿದೆ ಎಂದು ತಿಳಿಸಲಾಗಿತ್ತು. ಇದರ ನಂತರ ಚೀನಾ, ಜಮ್ಮು-ಕಾಶ್ಮೀರದ ವಿಷಯವು ಇತಿಹಾಸಕ್ಕೆ ಸಂಬಂಧಿಸಿದ ವಿವಾದವಾಗಿದೆ ಮತ್ತು ಇದರ ಪರಿಹಾರವನ್ನು ವಿಶ್ವಸಂಸ್ಥೆಯ ನಿರ್ಣಯ ಹಾಗೂ ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಹೇಳಿತ್ತು.
ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ನಂತಹ ಕೆಲವು ಯೋಜನೆಗಳು ಭಾರತೀಯ ಪ್ರದೇಶಗಳ ಮೂಲಕ ಹಾದುಹೋಗುತ್ತವೆ, ಅದರ ಮೇಲೆ ಪಾಕಿಸ್ತಾನವು ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ನಿಯಂತ್ರಣ ಸಾಧಿಸಿದೆ. ಪಾಕಿಸ್ತಾನದ ಈ ನಿಯಂತ್ರಣವನ್ನು ಬಲಪಡಿಸುವ ಅಥವಾ ಅದಕ್ಕೆ ಕಾನೂನುಬದ್ಧ ಮಾನ್ಯತೆ ನೀಡಲು ಪ್ರಯತ್ನಿಸುವ ಯಾವುದೇ ಪ್ರಯತ್ನಗಳನ್ನು ಭಾರತವು ಯಾವಾಗಲೂ ವಿರೋಧಿಸುತ್ತದೆ. ಚೀನಾ ಮತ್ತು ಪಾಕಿಸ್ತಾನ ದೇಶಗಳ ನಡುವೆ ಯಾವುದೇ ಸಾಮಾನ್ಯ ಗಡಿ ಇಲ್ಲ. ಭಾರತವು ೧೯೬೩ ರ ಚೀನಾ-ಪಾಕಿಸ್ತಾನ ಗಡಿ ಒಪ್ಪಂದವನ್ನು ಎಂದಿಗೂ ಮಾನ್ಯ ಮಾಡಿಲ್ಲ ಎಂದು ಹೇಳಿದರು.
ಈ ಒಪ್ಪಂದದ ಪ್ರಕಾರ, ಪಾಕಿಸ್ತಾನವು ಜಮ್ಮು-ಕಾಶ್ಮೀರದ ಶಕ್ಸಗಾಮ್ ಕಣಿವೆಯ ಪ್ರದೇಶವನ್ನು ಚೀನಾಕ್ಕೆ ನೀಡಿತ್ತು, ಇದರ ಮೇಲೆ ಅದು ೧೯೪೮ ರಲ್ಲಿ ಕಾನೂನುಬಾಹಿರವಾಗಿ ನಿಯಂತ್ರಣ ಸಾಧಿಸಿತ್ತು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine