ಇರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಭಾರತವು ಕಠಿಣ ನಿರ್ಬಂಧಗಳನ್ನು ಹೇರಬೇಕು!

ಇಸ್ರೇಲ್‌ನಿಂದ ಭಾರತಕ್ಕೆ ಒತ್ತಾಯ

ತೆಲ್ ಅವಿವ್ (ಇಸ್ರೇಲ್) – ಇರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ (‘ಐ.ಆರ್.ಜಿ.ಸಿ.’) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಅದರ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಇಸ್ರೇಲ್ ಭಾರತವನ್ನು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಇಸ್ರೇಲ್‌ನ ಉನ್ನತ ಅಧಿಕಾರಿಗಳು ಭಾರತಕ್ಕೆ ವಿನಂತಿ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಈ ವಿಷಯದಲ್ಲಿ ಭಾರತವು ನಿರ್ಧಾರ ತೆಗೆದುಕೊಳ್ಳುವಂತೆ ಇಸ್ರೇಲ್ ಪದೇ ಪದೇ ವಿನಂತಿಸಿದೆ ಎಂದು ಇಸ್ರೇಲಿ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಐ.ಆರ್.ಜಿ.ಸಿ.ಯಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಮಾತ್ರವಲ್ಲದೆ ಇತರ ಪ್ರದೇಶಗಳಿಗೂ ಅಪಾಯ ಉಂಟಾಗಿದೆ. ಕೆಲವು ದೇಶಗಳು ಈಗಾಗಲೇ ಐ.ಆರ್.ಜಿ.ಸಿ. ವಿರುದ್ಧ ಕ್ರಮ ಕೈಗೊಂಡಿವೆ ಎಂದೂ ಇಸ್ರೇಲ್ ಉಲ್ಲೇಖಿಸಿದೆ. ಭಾರತವೂ ಸಹ ಐ.ಆರ್.ಜಿ.ಸಿ.ಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಅದರ ಮೇಲೆ ಕಠಿಣ ನಿರ್ಬಂಧಗಳನ್ನು ವಿಧಿಸಬೇಕು ಎಂದು ಇಸ್ರೇಲ್ ಒತ್ತಾಯಿಸಿದೆ. ಆಸ್ಟ್ರೇಲಿಯಾ ಮತ್ತು ಯುರೋಪಿಯನ್ ಯೂನಿಯನ್ ಈಗಾಗಲೇ ಐ.ಆರ್.ಜಿ.ಸಿ. ಮೇಲೆ ನಿರ್ಬಂಧಗಳನ್ನು ವಿಧಿಸಿವೆ ಎಂದು ಇಸ್ರೇಲ್ ಹೇಳಿದೆ.