ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಸುಮನ ಕುಮಾರ ರಾಯ ಅವರ ಹೇಳಿಕೆ

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ತಾರಿಕ್ ರೆಹಮಾನ್ ಅವರ ಸರಕಾರ ರಚನೆಯಾಗಿ 100 ದಿನಗಳು ಪೂರೈಸಿವೆ. ಈ ಸಂದರ್ಭದಲ್ಲಿ ಅವರ ಕಾರ್ಯವೈಖರಿಯು ಅಲ್ಲಿನ ಹಿಂದೂಗಳ ಜೀವನದ ಮೇಲೆ ಬೀರಿದ ಪರಿಣಾಮಗಳ ಕುರಿತು ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ‘ಬಾಂಗ್ಲಾದೇಶ ಸನಾತನ ಪಾರ್ಟಿ’ಯ ಪ್ರಧಾನ ಕಾರ್ಯದರ್ಶಿ ಶ್ರೀ. ಸುಮನ ಕುಮಾರ ರಾಯ ಅವರು ಮಾತನಾಡುತ್ತಾ, ಹೊಸ ಸರಕಾರವು ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ಒಟ್ಟಾರೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯು ತೀವ್ರ ಕಳವಳದ ವಿಷಯವಾಗಿದೆ ಎಂದು ತಿಳಿಸಿದರು. ದೇಶದ ವಿವಿಧ ಭಾಗಗಳಲ್ಲಿ ಕೊಲೆ, ನಾಪತ್ತೆ, ಅತ್ಯಾಚಾರ, ದರೋಡೆ ಮತ್ತು ದೌರ್ಜನ್ಯದ ಘಟನೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಅಲ್ಪಸಂಖ್ಯಾತ ಹಿಂದೂಗಳು ಹೆಚ್ಚುತ್ತಿರುವ ಅಸುರಕ್ಷಿತತೆಯನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಧಾರ್ಮಿಕ ಭಾವನೆಗಳ ಹೆಸರಿನಲ್ಲಿ ನಡೆಯುವ ದಾಳಿಗಳು, ಧ್ವಂಸ, ಅವಮಾನ, ಭೂಮಿ ಒತ್ತುವರಿ, ದೇವಸ್ಥಾನಗಳ ವಶಪಡಿಸಿಕೊಳ್ಳುವಿಕೆ ಮತ್ತು ಸುಲಿಗೆಯಂತಹ ಕೃತ್ಯಗಳು ಸೇರಿವೆ.
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
‘ನೌಕಾ ಮರುಬಳಕೆ’ ವಲಯದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ! : Ship Recycling
ಸಂಯುಕ್ತ ಅರಬ್ ಅಮೀರತ್ (UAE) ಭಾರತದಿಂದ ‘ಬ್ರಹ್ಮೋಸ್’ ಕ್ಷಿಪಣಿ ಖರೀದಿಸಲು ಮಾತುಕತೆ ನಡೆಸುತ್ತಿದೆ! : India UAE BrahMos Deal
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ ಇಡೀ ಇರಾನ್ ಅನ್ನು ನಾಶಪಡಿಸಲಾಗುವುದು! : Donald Trump