
ಬೆಂಗಳೂರು – ಇಲ್ಲಿ ಕುಖ್ಯಾತ ಮುಸ್ಲಿಂ ‘ಪಂಕ್ಚರ್ ಮಾಫಿಯಾ’ಗಳು ಹಣಕ್ಕಾಗಿ ಮತ್ತೊಮ್ಮೆ ಜನರ ಜೀವಕ್ಕೆ ಕುತ್ತು ತರುವ ಕೃತ್ಯವನ್ನು ಆರಂಭಿಸಿದ್ದಾರೆ. ಈ ಗ್ಯಾಂಗ್ ವಾಹನ ಸವಾರರ ಜೀವದ ಜೊತೆ ಆಟವಾಡುತ್ತಿದೆ. ಅತಿವೇಗವಾಗಿ ಚಲಿಸುವ ದ್ವಿಚಕ್ರ ವಾಹನಗಳ ಟೈರ್ ಇದ್ದಕ್ಕಿದ್ದಂತೆ ಪಂಕ್ಚರ್ ಆದಲ್ಲಿ ಸವಾರರ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇತ್ತೀಚೆಗೆ ಮಾಗಡಿ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯ ಮೇಲೆ ಉದ್ದೇಶಪೂರ್ವಕವಾಗಿ ನೂರಾರು ಮೊಳೆಗಳನ್ನು ಹಾಕಿ ವಾಹನ ಸವಾರರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಘಟನೆ ಬೆಳಕಿಗೆ ಬಂದಿದೆ. ಪಂಕ್ಚರ್ ಅಂಗಡಿಗಳಿಗೆ ಗ್ರಾಹಕರನ್ನು ಆಕರ್ಷಿಸುವ ಕೇವಲ ಒಂದೇ ಒಂದು ದುರಾಸೆಯಿಂದ ಸಾರ್ವಜನಿಕರು ಓಡಾಡುವ ಮುಖ್ಯ ರಸ್ತೆಗಳಲ್ಲೇ ಮೊಳೆಗಳು, ಸ್ಕ್ರೂಗಳು ಮತ್ತು ಬ್ಲೇಡ್ಗಳನ್ನು ಎಸೆಯಲಾಗುತ್ತಿದೆ.
1. ನಗರದ ಹೆಬ್ಬಾಳ, ನೆಲಮಂಗಲ ಹೆದ್ದಾರಿ, ಬ್ಯಾಡರಹಳ್ಳಿ ಮತ್ತು ಮಾಗಡಿ ರಸ್ತೆಗಳಲ್ಲಿ ಈ ಕೃತ್ಯವು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ.
2. ಸಂಚಾರಿ ಪೊಲೀಸರು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ರಸ್ತೆಯ ಮೇಲೆ ಮೊಳೆ ಎಸೆಯುವ ಮಾಫಿಯಾಗಳನ್ನು ಪತ್ತೆಹಚ್ಚಬೇಕು. ಅಲ್ಲದೆ ಇಂತಹ ಘಟನೆಗಳಲ್ಲಿ ಶಾಮೀಲಾಗಿರುವ ಪಂಕ್ಚರ್ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ನಾಗರಿಕರು ಗೃಹ ಇಲಾಖೆಗೆ ಒತ್ತಾಯಿಸಿದ್ದಾರೆ.
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಭಾವಪೂರ್ಣ ಧಾರ್ಮಿಕ ವಿಧಿಗಳೊಂದಿಗೆ ಸಂಪನ್ನಗೊಂಡ ಶ್ರೀ ರಾಜಮಾತಂಗಿ ಮಹಾಯಜ್ಞ !
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ದೆಹಲಿಯ ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ: 21 ಜನರ ಸಾವು
ಕೇಂದ್ರ ಸರಕಾರದಿಂದ ‘ಟೆಂಪಲ್ ಬಾಂಡ್ಸ್’ ಯೋಜನೆ ಜಾರಿ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !