ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆಯ ಮೂಲಕ ಆಗ್ರಹ
ಪುನರಾಭಿವೃದ್ಧಿಯ ಹೆಸರಿನಲ್ಲಿ ಸಾವರ್ಕರ್ ಸದನವನ್ನು ನೆಲಸಮ ಮಾಡಲು ಬಿಡುವುದಿಲ್ಲ ! - ಸಾವರ್ಕರ್ ಪ್ರೇಮಿಗಳ ದೃಢ ನಿರ್ಧಾರ

ರತ್ನಾಗಿರಿ – ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳ ಮೇರು ವ್ಯಕ್ತಿತ್ವವಾದ ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಮುಂಬಯಿನ ದಾದರ್ ನಲ್ಲಿರುವ ಐತಿಹಾಸಿಕ ಸಾವರ್ಕರ್ ಸದನ ಕಟ್ಟಡದ ಮೇಲೆ ಪುನರಾಭಿವೃದ್ಧಿಯ ಹೆಸರಿನಲ್ಲಿ ಬಿಲ್ಡರ್ ಲಾಬಿಯಿಂದ ನೆಲಸಮವಾಗುವ ಆತಂಕ ಎದುರಾಗಿದೆ. ಈ ಐತಿಹಾಸಿಕ ಕಟ್ಟಡವನ್ನು ನೆಲಸಮವಾಗುವುದರಿಂದ ಉಳಿಸಲು ಮತ್ತು ಅದನ್ನು ಸಂರಕ್ಷಿಸಲು ಸರಕಾರ ಆ ಕಟ್ಟಡವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಧರಣಿ ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಈ ಪ್ರತಿಭಟನೆಯನ್ನು ಮೇ 28 ರಂದು ಇಲ್ಲಿನ ಜಯಸ್ತಂಭದಲ್ಲಿ ಮಾಡಲಾಯಿತು. ಈ ವೇಳೆ ಸಾವರ್ಕರ್ ಪ್ರೇಮಿಗಳು, ಪುನರಾಭಿವೃದ್ಧಿಯ ಹೆಸರಿನಲ್ಲಿ ಸಾವರ್ಕರ್ ಸದನವನ್ನು ನೆಲಸಮ ಮಾಡಲು ಬಿಡುವುದಿಲ್ಲ ಎಂಬ ದೃಢ ನಿರ್ಧಾರವನ್ನು ವ್ಯಕ್ತಪಡಿಸಿದರು. ಇದರ ನಂತರ ಸಾವರ್ಕರ್ ಪ್ರೇಮಿಗಳ ನಿಯೋಗವು ಜಿಲ್ಲಾಧಿಕಾರಿ ಮನೋಜ ಜಿಂದಾಲ್ ಅವರಿಗೆ ಬೇಡಿಕೆಗಳ ಮನವಿಯನ್ನು ನೀಡಿತು.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ