
ಕೊಲ್ಲಾಪುರ, 29 ಮೇ (ವಾರ್ತಾ.) – ಮಹಾರಾಷ್ಟ್ರದ ಹೆಮ್ಮೆಯಾಗಿರುವ ‘ಗೋಕುಲ್’ (ಕೊಲ್ಲಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ) ಹಾಲು ಸಂಘವು ಹಲಾಲ್ ಪ್ರಮಾಣಪತ್ರವನ್ನು ಪಡೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಹಲಾಲ್ ಪ್ರಮಾಣಪತ್ರವನ್ನು ತಕ್ಷಣವೇ ರದ್ದುಗೊಳಿಸದಿದ್ದರೆ ಉತ್ಪನ್ನಗಳನ್ನು ಬಹಿಷ್ಕರಿಸುವುದರ ಜೊತೆಗೆ ತೀವ್ರ ಜನಾಂದೋಲನವನ್ನು ಮಾಡಲಾಗುವುದು, ಹಾಗೆಯೇ ಸಮಯ ಬಂದರೆ ನೇರವಾಗಿ ‘ಗೋಕುಲ್’ ಮೇಲೆ ಬೃಹತ್ ಮೆರವಣಿಗೆಯನ್ನು ತೆಗೆಯಲಾಗುವುದು ಎಂದು ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದುತ್ವನಿಷ್ಠ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಬೇಡಿಕೆಯ ವಿವರವಾದ ಮನವಿಯನ್ನು ಸಂಘಟನೆಗಳ ಪ್ರತಿನಿಧಿಗಳು ಕೊಲ್ಲಾಪುರದ ‘ಗೋಕುಲ್’ ನ ಆಡಳಿತ ಮಂಡಳಿ, ಕೊಲ್ಲಾಪುರದ ಜಿಲ್ಲಾಧಿಕಾರಿ ಡಾ. ವಿಜಯ ರಾಠೋಡ್ ಮತ್ತು ಜನಸುರಾಜ್ಯ ಶಕ್ತಿ ಪಕ್ಷದ ಶಾಸಕ ಅಶೋಕ ಮಾನೆ ಅವರಿಗೆ ನೀಡಿದರು.

ಜಾತ್ಯತೀತ ದೇಶದಲ್ಲಿ ಸರಕಾರಿ ಪ್ರಮಾಣಪತ್ರಗಳನ್ನು ಬದಿಗೊತ್ತಿ ತೆಗೆದುಕೊಂಡ ಈ ನಿರ್ಧಾರದಿಂದ ಬಹುಸಂಖ್ಯಾತ ಹಿಂದೂ ಗ್ರಾಹಕರ ಭಾವನೆಗಳಿಗೆ ಧಕ್ಕೆಯಾಗಿದೆ ಮತ್ತು ಆಡಳಿತವು ತಕ್ಷಣ ಇದನ್ನು ಗಮನಿಸಿ ಈ ಪ್ರಮಾಣಪತ್ರವನ್ನು ರದ್ದುಗೊಳಿಸಬೇಕು ಎಂದು ಈ ಸಮಯದಲ್ಲಿ ಬಲವಾಗಿ ಒತ್ತಾಯಿಸಲಾಯಿತು. ಈ ವೇಳೆ ಕಾರ್ಯಕರ್ತರು ‘ಗೋಕುಲ್’ ನ ಹಲಾಲ್ ಪ್ರಮಾಣಪತ್ರದ ಪ್ರತಿಯನ್ನು ಸುಟ್ಟುಹಾಕಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ