ರಾಜ್ಯದಲ್ಲಿನ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇವರ ಆಗ್ರಹ

ಮೈಸೂರು – ‘ಹೊಸ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ೩ ಹುದ್ದೆಗಳನ್ನು ನೀಡಬೇಕು’ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಇಲ್ಲಿ ಮೇ ೧೮ ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಕಾಂಗ್ರೆಸ್ ಸರಕಾರಗಳಲ್ಲಿ ನಮ್ಮ ಸಮುದಾಯಕ್ಕೆ ಕನಿಷ್ಠ ೩ ಹುದ್ದೆಗಳನ್ನು ನೀಡಲಾಗುತ್ತಿತ್ತು. ಆದರೆ ೨೦೨೩ ರಿಂದ ೨೦೨೬ ರ ಅವಧಿಯಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದೆ. ಹಾಗಾಗಿ ಮತ್ತೊಬ್ಬರಿಗೆ ಅವಕಾಶ ನೀಡಬೇಕು” ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ, ಸಚಿವ ಸಂಪುಟ ಪುನರ್ರಚನೆಯ ಬದಲಿಗೆ ಹೊಸದಾಗಿ ಸಂಪುಟವನ್ನು ರಚಿಸಲಾಗುತ್ತಿದೆ. ನಾನು ಕೂಡ ಈ ಹುದ್ದೆಯ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಸೇಠ್ ಹೇಳಿದರು.
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಭಾವಪೂರ್ಣ ಧಾರ್ಮಿಕ ವಿಧಿಗಳೊಂದಿಗೆ ಸಂಪನ್ನಗೊಂಡ ಶ್ರೀ ರಾಜಮಾತಂಗಿ ಮಹಾಯಜ್ಞ !
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ದೆಹಲಿಯ ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ: 21 ಜನರ ಸಾವು
ಕೇಂದ್ರ ಸರಕಾರದಿಂದ ‘ಟೆಂಪಲ್ ಬಾಂಡ್ಸ್’ ಯೋಜನೆ ಜಾರಿ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !