ಆಕ್ರೋಶಿತ ಹಿಂದೂ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರಿಂದ ಆರೋಪಿಯ ಬಂಧನ

ಮೀರತ್ (ಉತ್ತರ ಪ್ರದೇಶ) – ಬಕ್ರೀದ್ ದಿನದಂದು ಗದಾ ಖಾನ್ ಎಂಬ ವ್ಯಕ್ತಿಯು ಇಲ್ಲಿನ ದುರ್ಗಾ ದೇವಸ್ಥಾನದಲ್ಲಿ ಮೇಕೆ ಮಾಂಸವನ್ನು ಬೇಯಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಮಯದಲ್ಲಿ ಎಚ್ಚೆತ್ತ ಹಿಂದೂಗಳು ಖಾನ್ ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ಘಟನೆಯಿಂದ ಇಡೀ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಖಾನ್ ನನ್ನು ಬಂಧಿಸಿದ್ದಾರೆ.
ಘಟನಾಕ್ರಮ ಹೀಗಿದೆ!
1. ಈ ಘಟನೆಯು ನಗರದ ನೌಚಂಡಿ ಮೈದಾನದಲ್ಲಿರುವ ದುರ್ಗಾ ದೇವಸ್ಥಾನದಲ್ಲಿ ನಡೆದಿದೆ.
2. ಗದಾ ಖಾನ್ ಮೂಲತಃ ರಾಜಸ್ಥಾನದ ನಿವಾಸಿ. ಆತ ದೇವಸ್ಥಾನದ ಆವರಣದಲ್ಲಿ ತೊಟ್ಟಿಲು ಹಾಕಿದ್ದನು. ಮೇ 28 ರಂದು ಆತ ಪವಿತ್ರ ದೇವಸ್ಥಾನದ ಒಳಗೆಯೇ ಮೇಕೆ ಮಾಂಸವನ್ನು ಬೇಯಿಸಲು ಪ್ರಾರಂಭಿಸಿದನು.
3. ಈ ಘಟನೆ ಸ್ಥಳೀಯ ಹಿಂದೂ ಸಂಘಟನೆಗಳಿಗೆ ತಿಳಿಯುತ್ತಲೇ ಅವರು ಇದನ್ನು ಖಂಡಿಸಿದರು. ‘ನರಸಿಂಹ ವಾಹಿನಿ’ ಮತ್ತು ‘ಕಾರ್ತಿಕ ಸೇನೆ’ ಸಂಘಟನೆಗಳ ಕಾರ್ಯಕರ್ತರು ತಕ್ಷಣವೇ ಘಟನಾ ಸ್ಥಳಕ್ಕೆ ತಲುಪಿದರು. ಅವರು ದೇವಸ್ಥಾನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
4. ಪರಿಸ್ಥಿತಿ ಹದಗೆಡುತ್ತಿರುವುದನ್ನು ಕಂಡು ದೊಡ್ಡ ಪೊಲೀಸ್ ಪಡೆ ಘಟನಾ ಸ್ಥಳಕ್ಕೆ ಬಂದಿತು. ಪೊಲೀಸರು ದೇವಸ್ಥಾನದಿಂದ ಮಾಂಸವನ್ನು ವಶಪಡಿಸಿಕೊಂಡರು. ಪೊಲೀಸ್ ಅಧಿಕಾರಿಗಳು ಆಕ್ರೋಶಗೊಂಡ ಹಿಂದುತ್ವವಾದಿಗಳನ್ನು ಸಮಾಧಾನಪಡಿಸುತ್ತಾ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ