”ವಂದೇ ಮಾತರಂ” ಅನ್ನು ಪೂರ್ಣವಾಗಿ ಹಾಡುವುದು ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿಯ ಭಾಗ! (ವಂತೆ)

ಕೇರಳಮ್‌ದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆರೋಪ

ಪಿಣರಾಯಿ ವಿಜಯನ್

ತಿರುವನಂತಪುರಂ (ಕೇರಳಮ್‌) – ಸಂಪೂರ್ಣ ‘ವಂದೇ ಮಾತರಂ’ ಹಾಡುವ ಅಗತ್ಯವಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ‘ವಂದೇ ಮಾತರಂ’ನ ಮೊದಲ 2 ನುಡಿಗಳನ್ನು ಮಾತ್ರ ಹಾಡುತ್ತಿರುವಾಗ ಎದ್ದು ನಿಲ್ಲುವ ಅಗತ್ಯವೂ ಇಲ್ಲ. ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಹಾಡುವುದು ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿಯ ಭಾಗವಾಗಿದೆ. ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಂಪೂರ್ಣ ಗೀತೆಯನ್ನು ಹಾಡಲಾಯಿತು, ಇದು ಆಗಬಾರದಿತ್ತು. ಆ ನಂತರ ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಂಡಂತೆ ಕಾಣುತ್ತಿದೆ. ಇದೇ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕೇರಳಮ್‌ದ ಮಾಜಿ ಮುಖ್ಯಮಂತ್ರಿ ಮತ್ತು ಈಗಿನ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರ ಭಾಷಣದ ಸಮಯದಲ್ಲಿ ಕೇರಳಮ್‌ ವಿಧಾನಸಭೆಯಲ್ಲಿ ಸಂಪೂರ್ಣ ‘ವಂದೇ ಮಾತರಂ’ ಹಾಡದೆ ರಾಷ್ಟ್ರಗೀತೆಗೆ ಅಪಮಾನ ಮಾಡಲಾಗಿದೆ ಎಂದು ಭಾಜಪ ಆರೋಪಿಸಿತ್ತು. ಇದರ ನಂತರ ವಿಜಯನ್ ಈ ಪ್ರಕರಣದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಪ್ರಸ್ತುತಪಡಿಸಲು ಕೇಂದ್ರ ಸರಕಾರದ ನಿರ್ದೇಶನಗಳಿವೆ; ಆದರೆ ಕೇರಳಮ್‌ ವಿಧಾನಸಭೆಯು ಅದನ್ನು ಪಾಲಿಸಲಿಲ್ಲ. ಇದು ರಾಜ್ಯಪಾಲರಿಗೆ ಮಾಡಿದ ಅಪಮಾನ. 150 ನೇ ವಾರ್ಷಿಕೋತ್ಸವದ ನಿಮಿತ್ತ ‘ವಂದೇ ಮಾತರಂ’ಗೆ ಅನಾಚಾರ ಮಾಡಲಾಗಿದೆ ಎಂದು ಭಾಜಪದ ಹಿರಿಯ ನಾಯಕ ಮತ್ತು ಶಾಸಕ ವಿ. ಮುರಳೀಧರನ್ ಆರೋಪಿಸಿದ್ದಾರೆ.

ಸಂಪಾದಕೀಯ ನಿಲುವು

ಸಂಪೂರ್ಣ 'ವಂದೇ ಮಾತರಂ' ಹಾಡದಿರುವುದು ಮುಸಲ್ಮಾನರನ್ನು ಓಲೈಸುವ ಕಾಂಗ್ರೆಸ್ ನ ನೀತಿಯಾಗಿತ್ತು ಮತ್ತು ಈಗ ಕೇಂದ್ರದಲ್ಲಿರುವ ಭಾಜಪ ಸರಕಾರ ಅದನ್ನು ಕಾನೂನಿನ ಮೂಲಕ ರದ್ದುಗೊಳಿಸಿದೆ. ಇದರಿಂದಾಗಿ ಸಂಪೂರ್ಣ 'ವಂದೇ ಮಾತರಂ' ಹಾಡುವುದು ಕಾನೂನುಬದ್ಧವಾಗಿದೆ. ಯಾರಾದರೂ ಅದನ್ನು ಉಲ್ಲಂಘಿಸಿದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ವಿಜಯನ್ ಆಗಿದ್ದರೂ ಕ್ರಮ ಕೈಗೊಳ್ಳಲೇಬೇಕು!