ದಾಳಿಗಳಿಂದಾಗಿ ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಒಪ್ಪಂದ ಮುರಿಯುವ ಭೀತಿ

ನ್ಯೂಯಾರ್ಕ್ / ಜೆರುಸಲೆಮ್ – ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದಕ್ಕೆ ಪ್ರಯತ್ನಗಳು ನಡೆಯುತ್ತಿವೆ. ಈ ನಡುವೆ ದಕ್ಷಿಣ ಲೆಬನಾನ್ ಭಾಗದಲ್ಲಿರುವ ಹಿಜ್ಬುಲ್ಲಾ ನೆಲೆಗಳ ಮೇಲೆ ದಾಳಿ ಮಾಡುವಂತೆ ಇಸ್ರೇಲ್ ತನ್ನ ಸೇನೆಗೆ ಆದೇಶಿಸಿದೆ. ಇದರಿಂದಾಗಿ ‘ಕದನ ವಿರಾಮ ಒಪ್ಪಂದ ಅಪಾಯಕ್ಕೆ ಸಿಲುಕಬಹುದು’ ಎಂದು ಇರಾನ್ನ ಸರಕಾರಿ ವಾಹಿನಿ ವರದಿ ಮಾಡಿದೆ. ಒಪ್ಪಂದದ ಪ್ರಮುಖ ಷರತ್ತುಗಳಲ್ಲಿ ಒಂದೇನೆಂದರೆ, ಇಸ್ರೇಲ್ ಲೆಬನಾನ್ ಮೇಲಿನ ದಾಳಿಯನ್ನು ನಿಲ್ಲಿಸಬೇಕು. ಈ ಕಾರಣದಿಂದಾಗಿ ಟ್ರಂಪ್ ಅವರು ನೆತನ್ಯಾಹು ಅವರ ಮೇಲೆ ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ನಡುವೆ ತೀವ್ರ ವಾಕ್ಸಮರ ನಡೆದಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ‘ಆಕ್ಸಿಯೋಸ್’ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಈ ವರದಿಯ ಪ್ರಕಾರ, ಟ್ರಂಪ್ ಅವರು ನೆತನ್ಯಾಹು ಅವರ ವಿರುದ್ಧ ಆಕ್ರೋಶ ಹೊರಹಾಕುತ್ತಾ, ‘ನೀವು ಏನು ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಇಸ್ರೇಲ್ನ ಭ್ರಷ್ಟಾಚಾರ ಪ್ರಕರಣದಲ್ಲಿ ನಾವು ಬೆಂಬಲ ನೀಡಿದ್ದರಿಂದಲೇ ನೀವು ಜೈಲಿಗೆ ಹೋಗುವುದರಿಂದ ಪಾರಾಗಿದ್ದೀರಿ ಎಂಬುದನ್ನು ಟ್ರಂಪ್ ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.
ವರದಿಯ ಪ್ರಕಾರ ಟ್ರಂಪ್ ಅವರು, “ನೀವು ಹುಚ್ಚರಾಗಿದ್ದೀರಿ. ನಾನಿರದಿದ್ದರೆ ನೀವು ಜೈಲಿನಲ್ಲಿರುತ್ತಿದ್ದಿರಿ. ನಾನು ನಿಮ್ಮನ್ನು ರಕ್ಷಿಸುತ್ತಾ ಬಂದಿದ್ದೇನೆ. ಪ್ರತಿಯೊಬ್ಬರೂ ನಿಮ್ಮನ್ನು ದ್ವೇಷಿಸುತ್ತಾರೆ. ನಿಮ್ಮ ಇಂತಹ ನಡೆಗಳಿಂದಾಗಿ ಈಗ ಪ್ರತಿಯೊಬ್ಬರೂ ಇಸ್ರೇಲ್ ಅನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.
ನೆತನ್ಯಾಹು ‘ ಸೇರಿಗೆ ಸವ್ವಾ ಸೇರು’ ಎಂಬ ನಿಲುವಿಗೆ ಬದ್ಧ!
ಟ್ರಂಪ್ ಅವರ ಆಕ್ಷೇಪಣೆಗಳಿಗೆ ನೆತನ್ಯಾಹು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಒಂದು ವೇಳೆ ಹಿಜ್ಬುಲ್ಲಾ ಇಸ್ರೇಲ್ ಮೇಲಿನ ದಾಳಿಯನ್ನು ನಿಲ್ಲಿಸದಿದ್ದರೆ, ಇಸ್ರೇಲ್ ಕೂಡ ಬೈರುತ್ನಲ್ಲಿರುವ ಗುರಿಗಳ ಮೇಲೆ ದಾಳಿ ಮಾಡುತ್ತದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ,” ಎಂದು ಅವರು ಹೇಳಿದ್ದಾರೆ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!