ದೇಶದ ಅಭಿವೃದ್ಧಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮ ಅತ್ಯಂತ ಪ್ರಮುಖವಾದುದು! – ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್

ಹಿಂದಿ ಪತ್ರಿಕೋದ್ಯಮದ 200ನೇ ವರ್ಷಾಚರಣೆ ಸಂಭ್ರಮ!

ಮುಂಬಯಿ – ಮಾತೃಭಾಷೆ ಮತ್ತು ಭಾರತೀಯ ಭಾಷೆಗಳ ಮೂಲಕ ಜ್ಞಾನ, ಸಂಸ್ಕೃತಿ ಹಾಗೂ ಮೌಲ್ಯಗಳ ಪರಂಪರೆಯು ಮುಂದಿನ ಪೀಳಿಗೆಗೆ ತಲುಪುತ್ತದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮಾತೃಭಾಷಾ ಶಿಕ್ಷಣ, ಭಾರತೀಯ ಭಾಷೆಗಳ ಸಂವರ್ಧನೆ (ಪೋಷಣೆ) ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹೇಳಿದರು. ‘ಮುಂಬಯಿ ಹಿಂದಿ ಪತ್ರಕರ್ತರ ಸಂಘ’ದ ವತಿಯಿಂದ ಆಯೋಜಿಸಲಾಗಿದ್ದ ಹಿಂದಿ ಪತ್ರಿಕೋದ್ಯಮದ 200ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯಮಂತ್ರಿಗಳು ಮಾತನ್ನು ಮುಂದುವರೆಸುತ್ತಾ, ‘‘ವಿಶ್ವದ ಬಹುತೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲಾಗುತ್ತದೆ. ಇದರಿಂದಾಗಿ ಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತೃಭಾಷೆಗೆ ಆದ್ಯತೆ ನೀಡುವ ನೀತಿಯು ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯೊಂದಿಗೆ ಇತರ ಭಾರತೀಯ ಭಾಷೆಗಳ ಜ್ಞಾನವನ್ನೂ ಸಹ ಬೆಳೆಸಿಕೊಳ್ಳಬೇಕು’’ ಎಂದರು.