
ಚೆನ್ನೈ (ತಮಿಳುನಾಡು) – ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ವಿಭಾಗೀಯ ಪೀಠವು ನೀಡಿರುವ ಮಧ್ಯಂತರ ಆದೇಶದ ಪ್ರಕಾರ, ೫,೦೦೦ ವರ್ಷಗಳಷ್ಟು ಹಳೆಯದಾದ ಪರಂಪರೆಯುಳ್ಳ ಬಿಂದು ಮಾಧವ ಪೆರುಮಾಳ್ ದೇವಾಲಯದ ಪಕ್ಕದಲ್ಲಿರುವ ಶೈಕ್ಷಣಿಕ ಆವರಣದಲ್ಲಿ ಚರ್ಚ್ನ ಅನಧಿಕೃತ ನಿರ್ಮಾಣವನ್ನು ತಡೆಯಲಾಗಿದೆ. ಥುತಿಪಟ್ಟು ಗ್ರಾಮದ (ಅಂಬೂರ ತಾಲೂಕು) ‘ಸರಕಾರ ಪೋರಂಬೋಕ್’ ಜಾಗದ ೬,೫೪೫ ಚದರ ಅಡಿ ವಿಸ್ತೀರ್ಣದ ವಿವಾದಿತ ಭೂಭಾಗದಲ್ಲಿ ಜೂನ್ ೨೨, ೨೦೨೬ ರವರೆಗೆ ‘ಯಥಾಸ್ಥಿತಿ’ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈ ಸ್ಥಳದಲ್ಲಿ ಪ್ರಸ್ತುತ ೭೦ ವರ್ಷಗಳಷ್ಟು ಹಳೆಯದಾದ ಸರಕಾರಿ ಅನುದಾನಿತ ಪ್ರಾಥಮಿಕ ಶಾಲೆಯಿದೆ. ಮೂಲತಃ ಈ ಜಾಗವು ಶ್ರೀನಿವಾಸ ನಾಯ್ಡು ಅವರಿಗೆ ಸೇರಿದ್ದಾಗಿದ್ದು, ನಂತರ ಅದನ್ನು ‘ಸರಕಾರ ಪೋರಂಬೋಕ್’ (ಸರಕಾರಿ ಪಾಳು ಬಿದ್ದ ಭೂಮಿ) ಎಂದು ವರ್ಗೀಕರಿಸಲಾಗಿತ್ತು. ಶ್ರೀನಿವಾಸ ನಾಯ್ಡು ಅವರು ಗ್ರಾಮದ ಮಕ್ಕಳಿಗಾಗಿ ಪ್ರಾಥಮಿಕ ಶಾಲೆಯನ್ನು ಸ್ಥಾಪಿಸುವ ಸ್ಪಷ್ಟ ಉದ್ದೇಶದಿಂದ ಈ ಜಾಗವನ್ನು ಜಾನ್ ಸುಂದರ್ ಅವರಿಗೆ ಹಸ್ತಾಂತರಿಸಿದ್ದರು.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ