ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು!

ಬೆಳಗಾವಿ – ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಶ್ರೀರಾಮ ಸೇನೆಯ ವತಿಯಿಂದ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ವಸ್ತ್ರಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ನಗರದ ‘ಕನ್ನಡ ಸಾಹಿತ್ಯ ಭವನ’ದ ಆವರಣದಲ್ಲಿ ಜಮಾಯಿಸಿದ್ದರು. ಇದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ ಕೇಸರಿ ವಸ್ತ್ರ ಹಂಚದಂತೆ ತಡೆದರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ್ ಕೋಕಿತಕರ್, “ರಾಜ್ಯದ ಕಾಂಗ್ರೆಸ್ ಸರಕಾರವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಜಾಬ್ ಅನ್ನು ಬೆಂಬಲಿಸುತ್ತಿದೆ. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದರೂ ಸರಕಾರವು ಒಂದು ನಿರ್ದಿಷ್ಟ ಸಮುದಾಯಕ್ಕೆ ಆದ್ಯತೆ ನೀಡುತ್ತಿದೆ ಮತ್ತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ” ಎಂದರು. (ಸಂವಿಧಾನದ ಪ್ರಕಾರ ಜಾತ್ಯತೀತ ವ್ಯವಸ್ಥೆ ಇದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರವಿರುವಾಗ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ಗೆ ಅನುಮತಿ ಏಕೆ? ಹೀಗೆ ಮಾಡುವ ಮೂಲಕ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ! – ಸಂಪಾದಕರು)
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!