ಮೃತ ಪಟ್ಟವರಲ್ಲಿ ವಿದೇಶಿ ನಾಗರಿಕರು ಹೆಚ್ಚು
ಹೋಟೆಲ್ ನಿಂದ ಸರಕಾರಿ ನಿಯಮಗಳ ಉಲ್ಲಂಘನೆಯಿಂದಾಗಿ ಹೆಚ್ಚಿದ ಸಾವಿನ ಸಂಖ್ಯೆ

ನವದೆಹಲಿ – ದೆಹಲಿಯ ಮಾಳವೀಯ ನಗರದಲ್ಲಿರುವ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ ಹೋಟೆಲ್ ನಲ್ಲಿ ಜೂನ್ 3 ರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ ವಿದೇಶಿ ನಾಗರಿಕರೇ ಹೆಚ್ಚಾಗಿದ್ದಾರೆ. ಗಾಯಗೊಂಡ 39 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 15 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅಗ್ನಿ ದುರಂತಕ್ಕೀಡಾದ ಕಟ್ಟಡವು 6 ಅಂತಸ್ತಿನದ್ದಾಗಿದ್ದು, ಈ ಹಿಂದೆ ಇದರಲ್ಲಿ ‘ಫ್ಲೋರಿಸ್ ಸ್ಟೇ’ ಹೋಟೆಲ್ ಕಾರ್ಯನಿರ್ವಹಿಸುತ್ತಿತ್ತು. ಇದುವರೆಗೆ ಕಟ್ಟಡದಿಂದ ಸುಮಾರು 37 ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಬೆಂಕಿ ಎಷ್ಟು ಭೀಕರವಾಗಿತ್ತೆಂದರೆ, ಹಲವರು ಪ್ರಾಣ ಉಳಿಸಿಕೊಳ್ಳಲು ಹೋಟೆಲ್ ನ ಮೇಲಿನ ಅಂತಸ್ತುಗಳಿಂದ ಕೆಳಗೆ ಜಿಗಿದಿದ್ದಾರೆ. ರಕ್ಷಣಾ ಕಾರ್ಯದ ಸಮಯದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ತಗುಲಲು ನಿಖರವಾದ ಕಾರಣ ಏನೆಂಬುದು ಇದುವರೆಗೂ ಸ್ಪಷ್ಟವಾಗಿಲ್ಲ.
ವಿದ್ಯುತ್ ಸ್ಥಗಿತಗೊಂಡು ಎಲೆಕ್ಟ್ರಾನಿಕ್ ಪ್ರವೇಶ ದ್ವಾರ ಮುಚ್ಚಿ ಕೊಂಡಿದ್ದರಿಂದ ಜನರು ಒಳಗೇ ಸಿಲುಕಿದರು !
ಕಟ್ಟಡದ ಮುಖ್ಯ ಪ್ರವೇಶ ದ್ವಾರವು ಎಲೆಕ್ಟ್ರಾನಿಕ್ ವ್ಯವಸ್ಥೆಯನ್ನು ಹೊಂದಿತ್ತು. ಬೆಂಕಿ ಹೊತ್ತಿಕೊಂಡಾಗ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಈ ದ್ವಾರವು ಸ್ವಯಂಚಾಲಿತವಾಗಿ ಮುಚ್ಚಿ ಕೊಂಡಿತು. ಇದರಿಂದಾಗಿ ಜನರು ಹೊರಗೆ ಬರುವ ದಾರಿ ಮುಚ್ಚಿ ಕೊಂಡಿತು. ಸ್ಥಳೀಯರು ತಕ್ಷಣವೇ ಗಾಜುಗಳನ್ನು ಒಡೆದು ಒಳಗೆ ಸಿಲುಕಿದ್ದ ಜನರಿಗೆ ಸಹಾಯ ಮಾಡಲು ಯತ್ನಿಸಿದರು. ಕೆಲವು ಜನರು ಎರಡನೇ ಅಂತಸ್ತಿನಿಂದ ಕೆಳಗೆ ಜಿಗಿದಿದ್ದರಿಂದ ತೀವ್ರವಾಗಿ ಗಾಯಗೊಂಡರು. ಮೇಲಿಂದ ಜಿಗಿಯುವವರ ಪ್ರಾಣ ಉಳಿಸಲು ಸ್ಥಳೀಯರು ಹತ್ತಿರದ ಹೋಟೆಲ್ ಗಳಿಂದ ಹಾಸಿಗೆಗಳನ್ನು ತಂದು ನೆಲದ ಮೇಲೆ ಹಾಸಿದರು. ಮಹಿಳೆಯೊಬ್ಬರು ಹಗ್ಗದ ಸಹಾಯದಿಂದ ಕೆಳಗೆ ಇಳಿಯಲು ಪ್ರಯತ್ನಿಸುತ್ತಿದ್ದಾಗ ಕೈ ಜಾರಿ ಹಾಸಿಗೆಯ ಮೇಲೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಬರುವವರೆಗೂ ಸ್ಥಳೀಯರೇ ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ಪ್ರಧಾನಿ ಮೋದಿ ಅವರಿಂದ ಸಂತಾಪ
ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. (ಗಾಯಾಳುಗಳಿಗೆ ಇನ್ನೂ ಹೆಚ್ಚಿನ ಮೊತ್ತವನ್ನು ನೀಡುವುದು ಅಗತ್ಯವಾಗಿದೆ; ಏಕೆಂದರೆ ಚಿಕಿತ್ಸೆಯ ವೆಚ್ಚದ ಜೊತೆಗೆ, ಅಪಘಾತದಲ್ಲಿ ವಿಕಲಚೇತನರಾದರೆ ಜೀವನ ನಡೆಸಲು ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. – ಸಂಪಾದಕರು)
6 ಕೋಣೆಗಳಿಗೆ ಮಾತ್ರ ಅನುಮತಿ ಇತ್ತು, ಆದರೆ ಕಟ್ಟಿದ್ದು 25 ಕೋಣೆಗಳು
ಕಟ್ಟಡದ ನೆಲ ಅಂತಸ್ತಿನಲ್ಲಿ ರೆಸ್ಟೋರೆಂಟ್ ನಡೆಸಲಾಗುತ್ತಿತ್ತು, ಉಳಿದ ಭಾಗವನ್ನು ಹೋಟೆಲ್ ಆಗಿ ಬಳಸಲಾಗುತ್ತಿತ್ತು. ಹೋಟೆಲ್ ಗೆ ಪ್ರವೇಶಿಸಲು ಮತ್ತು ಹೊರಬರಲು ಕೇವಲ ಒಂದೇ ಒಂದು ಮಾರ್ಗವಿತ್ತು. ಹೋಟೆಲ್ನಲ್ಲಿ ಕೇವಲ 6 ಕೋಣೆಗಳನ್ನು ನಿರ್ಮಿಸಲು ಸರಕಾರದಿಂದ ಅನುಮತಿ ನೀಡಲಾಗಿತ್ತು; ಆದರೆ ಇಲ್ಲಿ ಕಾನೂನುಬಾಹಿರವಾಗಿ 25 ಕೋಣೆಗಳನ್ನು ನಿರ್ಮಿಸಲಾಗಿತ್ತು.
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ