ವಿಮಾ ಸಂಸ್ಥೆಯ ಮುಸ್ಲಿಂ ವ್ಯವಸ್ಥಾಪಕನಿಂದ ಹಿಂದೂ ಯುವತಿಗೆ ಕಿರುಕುಳ !
ಸಂಸ್ಥೆಯ ವ್ಯವಸ್ಥಾಪಕ ಮೊಹಮ್ಮದ್ ಅಲಿಯಾಸ್ ಜಾಫರ್ ಸೈಯದ್ ಬಂಧನ !

ಪುಣೆ – ಔಂಧ್ನ ಪ್ರಸಿದ್ಧ ‘ಸ್ಟಾರ್ ಯೂನಿಯನ್ ದೈ ಇಚಿ ಲೈಫ್ ಇನ್ಶೂರೆನ್ಸ್ ಕಂಪನಿ’ ಎಂಬ ವಿಮಾ ಸಂಸ್ಥೆಯಲ್ಲಿ ಕೆಲಸ ಮಾಡುವ ಹಿಂದೂ ಯುವತಿಯ ಅತ್ಯಾಚಾರ, ಅವಳೊಂದಿಗೆ ಅಶ್ಲೀಲ ಸಂಭಾಷಣೆ ಮತ್ತು ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಮುಸ್ಲಿಂ ವ್ಯವಸ್ಥಾಪಕ ಮೊಹಮ್ಮದ್ ಅಲಿಯಾಸ್ ಜಾಫರ್ ಸೈಯದ್ನನ್ನು ಹಿಂಜವಡಿ ಪೊಲೀಸರು ಬಂಧಿಸಿದ್ದಾರೆ. ‘ಕಾರ್ಪೊರೇಟ್ ಜಿಹಾದ್’ ಪ್ರಕರಣಗಳಿಂದ ಈ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಯ ಪ್ರಶ್ನೆ ಎದುರಾಗಿದೆ.
1. ಆರೋಪಿ ಜಾಫರ್ ಉನ್ನತ ಹುದ್ದೆಯಲ್ಲಿದ್ದು, ಆತ ಶಾಖೆಯ ವ್ಯವಸ್ಥಾಪಕನಾಗಿದ್ದಾನೆ. ಸಂತ್ರಸ್ತ ಯುವತಿಗೆ ಕೆಲಸದ ಹೊರತಾಗಿ ವೈಯಕ್ತಿಕ ಕೆಲಸಗಳಿಗಾಗಿ ಆತ ಮೊಬೈಲ್ ಕರೆ ಮಾಡುತ್ತಿದ್ದನು.
2. ಆರೋಪಿಯು ಸಂತ್ರಸ್ತೆಯೊಂದಿಗೆ ಮಾತನಾಡುವಾಗ ಅತ್ಯಂತ ಅಶ್ಲೀಲ ಭಾಷೆಯಲ್ಲಿ ಮತ್ತು ಅವಳ ಮನಸ್ಸಿಗೆ ಲಜ್ಜೆ ಉಂಟಾಗುವಂತೆ ಸಂಭಾಷಣೆ ನಡೆಸಿ, ಅವಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದನು.
3. ಒಂದು ದಿನ ಕೆಲಸದ ನೆಪದಲ್ಲಿ ಆತ ಅವಳನ್ನು ಲೋನಾವಳಾಕ್ಕೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಆತ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಲು ಯತ್ನಿಸಿದ್ದನು.
4. ಹಿರಿಯ ಅಧಿಕಾರಿಯ ಈ ವಿಕೃತ ನಡವಳಿಕೆಯಿಂದ ಬೇಸತ್ತ ಸಂತ್ರಸ್ತ ಯುವತಿಯು ಹಿಂಜವಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !