ರೋಗಿಗಳನ್ನು ಬಿಟ್ಟು ಓಡಿಹೋದ ವೈದ್ಯರು ಮತ್ತು ಸಿಬ್ಬಂದಿ!

ಮುಜಫ್ಫರಪುರ (ಬಿಹಾರ) – ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯು ಮೇ 3 ರ ರಾತ್ರಿ ನಡೆದಿದೆ. ಸ್ಥಳೀಯರ ಹೇಳುವಂತೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟಕವು 5 ನೇ ಮಹಡಿಯಲ್ಲಿದ್ದರಿಂದ ಅಗ್ನಿಶಾಮಕ ದಳದವರಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ತೊಂದರೆಯಾಯಿತು. ಬೆಂಕಿ ಹೊತ್ತಿಕೊಂಡ ತಕ್ಷಣವೇ ನೀರಿನ ವ್ಯವಸ್ಥೆ ಮಾಡಿದ್ದರೆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದಿತ್ತು ಎಂದು ಜನರು ಹೇಳುತ್ತಿದ್ದಾರೆ.
1.ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಇದ್ದ ಸ್ಥಿತಿಯಲ್ಲೇ ಬಿಟ್ಟು ಓಡಿಹೋದರು ಎಂದು ರೋಗಿಗಳ ಕುಟುಂಬಸ್ಥರು ಆರೋಪಿಸಿದ್ದಾರೆ.
2.ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಸ್ಥಳಕ್ಕೆ ತಲುಪಿದಾಗ, ಆಸ್ಪತ್ರೆಯ ಹೆಚ್ಚಿನ ಸಿಬ್ಬಂದಿಗಳು ಅಲ್ಲಿ ಇರಲಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
3.ಮುಜಫ್ಫರಪುರದ ಜಿಲ್ಲಾಧಿಕಾರಿ ಸುಬ್ರತಾ ಕುಮಾರ ರವರು ಮಾತನಾಡಿ, ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ತಮ್ಮ ರೋಗಿಗಳು ವಾರ್ಡ್ಗಳಿಂದ ಕಾಣೆಯಾಗಿದ್ದಾರೆ ಎಂದು ಕೆಲವು ಸಂಬಂಧಿಕರು ಆರೋಪಿಸಿದ್ದು, ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !