ಸಂತ ಕಬೀರ್ನಗರ (ಉತ್ತರ ಪ್ರದೇಶ) ಇಲ್ಲಿನ ಘಟನೆ
ಬಂಧನದ ವೇಳೆಯೂ ಅಪರಾಧದ ಬಗ್ಗೆ ಹೆಮ್ಮೆಯ ಭಾವನೆ !

ಸಂತ ಕಬೀರ್ನಗರ (ಉತ್ತರ ಪ್ರದೇಶ) – ಇಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಕಾಮಿಲ್ ಮತ್ತು ಮೊಹಮ್ಮದ್ ಅಹ್ಮದ್ ಅವರನ್ನು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯ ಬಳಿ ಕುಡಿಯಲು ನೀರು ಕೇಳುವ ನೆಪದಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದರು. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾಳೆ.
ಬಂಧನದ ನಂತರ ಆರೋಪಿಗಳು ಪೊಲೀಸರ ಮುಂದೆಯೇ ತಮ್ಮ ಮೀಸೆಯನ್ನು ತಿರುವಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ‘ಚಿನ್ನದ ಸರ ಎಲ್ಲಿದೆ ?’ ಎಂದು ಕೇಳಿದಾಗ, ಅದನ್ನು ೨೫ ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿರುವುದಾಗಿ ಹೇಳಿದರು. ಕಳ್ಳರ ಮುಖದಲ್ಲಿ ಯಾವುದೇ ಪಶ್ಚಾತ್ತಾಪದ ಲಕ್ಷಣ ಇರಲಿಲ್ಲ. ಪೊಲೀಸರ ಭಯವೂ ಅವರ ಮುಖದಲ್ಲಿ ಕಾಣಿಸುತ್ತಿರಲಿಲ್ಲ.
ಇಬ್ಬರದ್ದೂ ಅಪರಾಧ ಹಿನ್ನೆಲೆಯಾಗಿದೆ. ಒಬ್ಬನ ಮೇಲೆ ಕೊಲೆ ಮತ್ತು ‘ಗ್ಯಾಂಗ್ಸ್ಟರ್ ಆಕ್ಟ್’ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಂಧನದ ವೇಳೆ ಆರೋಪಿಗಳ ಬಳಿ ೨ ಕಿಲೋ ಗಾಂಜಾ, ೧ ದ್ವಿಚಕ್ರ ವಾಹನ, ೪ ಮೊಬೈಲ್, ಮೆಣಸಿನ ಪುಡಿ ಮತ್ತು ಸಿಮ್ ಕಾರ್ಡ್ ಪತ್ತೆಯಾಗಿವೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!