ಬುಲಂದ್‌ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!

ಮನೆ ಮಾಲೀಕನ ಮಾತಿನ ಮೇರೆಗೆ ಮಂದಿರದಲ್ಲಿ ಪ್ರಾರ್ಥನೆ ಮಾಡಿದ ಹಿನ್ನೆಲೆಯಲ್ಲಿ ಮನೆ ಮಾಲೀಕನ ವಿರುದ್ಧವೂ ಮೊಕದ್ದಮೆ ದಾಖಲು!

ಬುಲಂದ್‌ಶಹರ್ (ಉತ್ತರ ಪ್ರದೇಶ) – ಇಲ್ಲಿನ ಒಲಿನಾ ಗ್ರಾಮದ ಹನುಮಾನ್ ಮಂದಿರವೊಂದರಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಸರ್ ಮೊಹಮ್ಮದ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಲಭ್ಯವಿರುವ ಮಾಹಿತಿ ಪ್ರಕಾರ, ರಾಜ್‌ಕುಮಾರ್ ಎಂಬ ವ್ಯಕ್ತಿಯ ಮನೆ ನಿರ್ಮಾಣದ ಕೆಲಸ ನಡೆಯುತ್ತಿತ್ತು ಮತ್ತು ಅಲ್ಲಿ ಅಸರ್ ಮೊಹಮ್ಮದ್ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದನು. ಮಧ್ಯಾಹ್ನ ಉಳಿದ ಕಾರ್ಮಿಕರು ಊಟಕ್ಕೆ ಹೋದಾಗ, ಅಸರ್ ಮೊಹಮ್ಮದ್ ನಿರ್ಮಾಣ ಹಂತದಲ್ಲಿದ್ದ ಮನೆಯ ಎದುರಿಗಿದ್ದ ಹನುಮಾನ್ ಮಂದಿರದಲ್ಲಿ ಪ್ರಾರ್ಥನೆ ಮಾಡಿದ್ದನು. ರಾಜ್‌ಕುಮಾರ್ ನೀಡಿದ ಸೂಚನೆಯ ಮೇರೆಗೇ ಆತ ಹೀಗೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಮನೆ ಮಾಲೀಕ ರಾಜ್‌ಕುಮಾರ್ ವಿರುದ್ಧವೂ ಮೊಕದ್ದಮೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ತೀವ್ರ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.

ಸಂಪಾದಕೀಯ ನಿಲುವು

ಇಂತಹ ಯಾವುದೇ ಮುಸ್ಲಿಂ ವ್ಯಕ್ತಿ ಎಂದಾದರೂ ಯಾವೊಬ್ಬ ಹಿಂದೂವಿಗಾದರೂ ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಹೇಳುತ್ತಾರೆಯೇ? ಹಿಂದೂಗಳಿಗೆ ಧರ್ಮ ಶಿಕ್ಷಣ ಮತ್ತು ಧರ್ಮಾಭಿಮಾನ ಇಲ್ಲದಿರುವುದರಿಂದಲೇ ಅವರು ಇಂತಹ ಕೃತ್ಯಗಳನ್ನು ಮಾಡುತ್ತಾರೆ!