ಮನೆ ಮಾಲೀಕನ ಮಾತಿನ ಮೇರೆಗೆ ಮಂದಿರದಲ್ಲಿ ಪ್ರಾರ್ಥನೆ ಮಾಡಿದ ಹಿನ್ನೆಲೆಯಲ್ಲಿ ಮನೆ ಮಾಲೀಕನ ವಿರುದ್ಧವೂ ಮೊಕದ್ದಮೆ ದಾಖಲು!

ಬುಲಂದ್ಶಹರ್ (ಉತ್ತರ ಪ್ರದೇಶ) – ಇಲ್ಲಿನ ಒಲಿನಾ ಗ್ರಾಮದ ಹನುಮಾನ್ ಮಂದಿರವೊಂದರಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಸರ್ ಮೊಹಮ್ಮದ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಲಭ್ಯವಿರುವ ಮಾಹಿತಿ ಪ್ರಕಾರ, ರಾಜ್ಕುಮಾರ್ ಎಂಬ ವ್ಯಕ್ತಿಯ ಮನೆ ನಿರ್ಮಾಣದ ಕೆಲಸ ನಡೆಯುತ್ತಿತ್ತು ಮತ್ತು ಅಲ್ಲಿ ಅಸರ್ ಮೊಹಮ್ಮದ್ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದನು. ಮಧ್ಯಾಹ್ನ ಉಳಿದ ಕಾರ್ಮಿಕರು ಊಟಕ್ಕೆ ಹೋದಾಗ, ಅಸರ್ ಮೊಹಮ್ಮದ್ ನಿರ್ಮಾಣ ಹಂತದಲ್ಲಿದ್ದ ಮನೆಯ ಎದುರಿಗಿದ್ದ ಹನುಮಾನ್ ಮಂದಿರದಲ್ಲಿ ಪ್ರಾರ್ಥನೆ ಮಾಡಿದ್ದನು. ರಾಜ್ಕುಮಾರ್ ನೀಡಿದ ಸೂಚನೆಯ ಮೇರೆಗೇ ಆತ ಹೀಗೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಮನೆ ಮಾಲೀಕ ರಾಜ್ಕುಮಾರ್ ವಿರುದ್ಧವೂ ಮೊಕದ್ದಮೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ತೀವ್ರ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!