
ಕೋಲಕಾತಾ (ಬಂಗಾಳ) – ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ತೃಣಮೂಲ ಕಾಂಗ್ರೆಸ್ಸಿನ ಮಾಜಿ ಶಾಸಕ ಹಾಗೂ ಭಾಂಗರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶೌಕತ್ ಮೊಲ್ಲಾನನ್ನು ಬಂಧಿಸಿದೆ. ಈ ಪ್ರಕರಣವು ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಸ್ಫೋಟಕ್ಕೆ ಸಂಬಂಧಿಸಿದ್ದಾಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಸ್ಫೋಟ ನಡೆದಾಗ ಆ ಪ್ರದೇಶದಲ್ಲಿ ‘ಕ್ರೂಡ್ ಬಾಂಬ್’ (ಕಚ್ಚಾ ಬಾಂಬ್) ತಯಾರಿಸಲಾಗುತ್ತಿತ್ತು. ರಾಷ್ಟ್ರೀಯ ತನಿಖಾ ದಳ ನೀಡಿದ ಮಾಹಿತಿಯನುಸಾರ, ಜೂನ್ 5 ರಂದು ಜೀವನತಲಾದಲ್ಲಿರುವ ಶೌಕತ್ ಮೊಲ್ಲಾನ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು; ಆದರೆ ಆತ ಅಲ್ಲಿ ಸಿಗಲಿಲ್ಲ. ದಾಳಿಯ ಸುಳಿವು ಸಿಗುತ್ತಿದ್ದಂತೆ ಆತ ಮೋಟಾರ್ ಸೈಕಲ್ ಮೇಲೆ ಪರಾರಿಯಾಗಿದ್ದ ಎಂದು ತನಿಖಾ ದಳ ದಾವೆ ಮಾಡಿದೆ.
ಬಾಂಗ್ಲಾದೇಶಕ್ಕೆ ಪಲಾಯನ ಮಾಡಲು ಯತ್ನ!
ಶೌಕತ್ ಬಾಂಗ್ಲಾದೇಶಕ್ಕೆ ಪಲಾಯನ ಮಾಡಲು ಪ್ರಯತ್ನಿಸಿದ್ದನು; ಆದರೆ ಅದರಲ್ಲಿ ವಿಫಲವಾದಾಗ ಆತ ಓರ್ವ ವಕೀಲರನ್ನು ಸಂಪರ್ಕಿಸಿ ತನಿಖಾ ದಳದ ಮುಂದೆ ಶರಣಾಗಲು ಸಿದ್ಧತೆ ನಡೆಸಿದ್ದನು. ಆತ ಶರಣಾಗುವ ಮುನ್ನವೇ ತನಿಖಾ ದಳವು ಕೋಲಕಾತಾ ಬಳಿಯ ಬಾರುಯಿಪುರ ಪ್ರದೇಶದಲ್ಲಿ ಆತನನ್ನು ಬಂಧಿಸಿತು. ಆದರೆ ಶೌಕತ್ ಮೊಲ್ಲಾನ ಕುಟುಂಬದವರು, ‘ಆತನನ್ನು ಬಂಧಿಸಿಲ್ಲ, ಬದಲಿಗೆ ಆತ ಸ್ವತಃ ಶರಣಾಗಿದ್ದಾನೆ’ ಎಂದು ದಾವೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಶಂಶುಲ್ ಸರದಾರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!