‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ

ಭಾರತವನ್ನು 2047 ರ ವೇಳೆಗೆ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಪಿತೂರಿ

ನವ ದೆಹಲಿ – ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಿ 2047 ರ ವೇಳೆಗೆ ‘ಶರಿಯತ್‌’ ಆಧಾರಿತ ವ್ಯವಸ್ಥೆಯನ್ನು ಸ್ಥಾಪಿಸಲು ಮುಸ್ಲಿಂ ಗುಂಪುಗಳು ಸಂಚು ರೂಪಿಸುತ್ತಿವೆ. ಈ ಯೋಜನೆಯಡಿ ಸಶಸ್ತ್ರ ಸಂಘರ್ಷದ ದಿಸೆಯಲ್ಲಿ ಕೆಲಸ ಮಾಡಬಲ್ಲಂತಹ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿತ್ತು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಈ ಸಂಗತಿಗಳನ್ನು ಪರಿಗಣಿಸಿ, ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಈ ಯೋಜನೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ನಾಯಕರ ಮತ್ತು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (ಪಿಎಫ್‌ಐ) ಎಂಬ ಜಿಹಾದಿ ಸಂಘಟನೆಯ ವಿರುದ್ಧ ಆರೋಪಗಳನ್ನು ನಿಗದಿಪಡಿಸಲು ಆದೇಶಿಸಿದೆ.

2022 ರಲ್ಲಿ ರಾಷ್ಟ್ರೀಯ ತನಿಖಾ ದಳವು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿತ್ತು. ಇದರಲ್ಲಿ ಪಿಎಫ್‌ಐನ 20 ನಾಯಕರನ್ನು ಬಂಧಿಸಲಾಗಿತ್ತು. ಇದರಿಂದ ಮೇಲಿನ ಮಾಹಿತಿ ಬೆಳಕಿಗೆ ಬಂದಿತ್ತು. ತದನಂತರ ಈ ಸಂಘಟನೆಯನ್ನು ನಿಷೇಧಿಸಲಾಯಿತು.