ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷದ ೫ ಕಾರ್ಯಕರ್ತರ ಬಂಧನ

ಕೋಲಕಾತಾ (ಬಂಗಾಳ) – ಜೂನ್ ೭ ರ ಮಧ್ಯರಾತ್ರಿಯ ನಂತರ ಜಾದವ್ಪುರ ರೈಲ್ವೆ ನಿಲ್ದಾಣದ ಆವರಣದಲ್ಲಿ ರೈಲ್ವೆ ಆಡಳಿತದಿಂದ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ನಿಲ್ದಾಣದ ಬಳಿಯಿದ್ದ ಹಲವಾರು ಅನಧಿಕೃತ ಅಂಗಡಿಗಳು ಮತ್ತು ಕಟ್ಟಡಗಳನ್ನು ಕೆಡವಲು ಬುಲ್ಡೋಜರ್ಗಳನ್ನು ಬಳಸಲಾಯಿತು. ಇದನ್ನು ವಿರೋಧಿಸಿದ ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬುಲ್ಡೋಜರ್ ಮುಂದೆ ಮಲಗುವುದು, ಯಂತ್ರಗಳ ಮೇಲೆ ಹತ್ತುವುದರ ಮೂಲಕ ಪ್ರತಿಭಟಿಸಿದರು.
ಆಡಳಿತದ ಕೆಲಸಕ್ಕೆ ಅಡ್ಡಿಪಡಿಸಲು ಯತ್ನಿಸಿದ ಕಾರಣಕ್ಕೆ ಹಲವು ರಾಜಕೀಯ ನಾಯಕರನ್ನು ವಶಕ್ಕೆ ಪಡೆಯಲಾಯಿತು ಮತ್ತು ೫ ಜನರನ್ನು ಬಂಧಿಸಲಾಯಿತು. ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಅವರನ್ನು ಕೂಡ ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರವನ್ನೂ ನಡೆಸಿದರು. ರೈಲ್ವೆ ಸುರಕ್ಷತಾ ಪಡೆ (RPF), ಕೋಲಕಾತಾ ಪೊಲೀಸ್ ಮತ್ತು ಕೇಂದ್ರ ಭದ್ರತಾ ಸಂಸ್ಥೆಗಳ ಯೋಧರ ಬಿಗಿ ಬಂದೋಬಸ್ತ್ನಲ್ಲಿ ಈ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ರೈಲ್ವೆ ಆಡಳಿತದ ನಿಲುವು!
“ಜಾದವ್ಪುರ ರೈಲ್ವೆ ನಿಲ್ದಾಣದ ಆವರಣದಲ್ಲಿದ್ದ ಅಂಗಡಿಗಳು, ಸ್ಟಾಲ್ಗಳು ಮತ್ತು ಕಟ್ಟಡಗಳು ಸಂಪೂರ್ಣವಾಗಿ ಕಾನೂನುಬಾಹಿರವಾಗಿದ್ದವು. ರೈಲ್ವೆ ಆಸ್ತಿಯನ್ನು ಒತ್ತುವರಿ ಮಾಡಲಾಗಿತ್ತು. ಈ ಕ್ರಮವನ್ನು ಕಾನೂನು ಮತ್ತು ನಿಯಮಗಳನ್ನು ಪಾಲಿಸಿಯೇ ಪೂರ್ಣಗೊಳಿಸಲಾಗಿದೆ. ಇದಕ್ಕೂ ಮುನ್ನ ರೈಲ್ವೆ ಇಲಾಖೆಯು ಹೌರಾ ಮತ್ತು ಸಿಯಾಲ್ದಾ ನಿಲ್ದಾಣಗಳ ಆವರಣದಲ್ಲಿನ ಒತ್ತುವರಿಯನ್ನು ತೆರವುಗೊಳಿಸಲು ಇಂತಹದೇ ಕಾರ್ಯಾಚರಣೆಯನ್ನು ನಡೆಸಿತ್ತು.”
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ