ಸುಲಿಗೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಬ್ಯಸಾಚಿ ದತ್ತಾ ಬಂಧನ

ಕೊಲಕಾತಾ (ಬಂಗಾಳ) – 8 ವರ್ಷಗಳ ಹಿಂದೆ ಉದ್ಯಮಿಯೊಬ್ಬರಿಂದ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಿಧಾನನಗರ ನಗರದ ಮಾಜಿ ಮಹಾಪೌರ ಸಬ್ಯಸಾಚಿ ದತ್ತಾ ಅವರನ್ನು ಪೊಲೀಸರು ರಾಯಗಾಚಿ ಪ್ರದೇಶದಿಂದ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಉದ್ಯಮಿ ದೂರು ದಾಖಲಿಸಿದ್ದರು. ಸುಲಿಗೆಯ ಆರೋಪಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳು ಪೊಲೀಸರಿಗೆ ಸಿಕ್ಕಿವೆ ಎಂದು ವರದಿಯಾಗಿದೆ; ಆದರೆ ದತ್ತಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಚಿವ ಸಂಪುಟದಲ್ಲಿದ್ದ ಅಂದಿನ ಸಚಿವ ಸುಜಿತ್ ಬೋಸ್ ಅವರನ್ನು ಸಹ ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಸಂಪಾದಕೀಯ ನಿಲುವು

ತೃಣಮೂಲ ಕಾಂಗ್ರೆಸ್ಸಿನ ಇಂತಹ ಅಪರಾಧಿಗಳನ್ನು ಅಂದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಬಲಿಸಿದ್ದರೇ ?, ಎಂಬುದರ ಕುರಿತು ತನಿಖೆ ನಡೆಸಿ ಅವರು ದೋಷಿಗಳೆಂದು ಕಂಡುಬಂದಲ್ಲಿ ಅವರ ಮೇಲೆಯೂ ಕಠಿಣ ಕ್ರಮ ಕೈಗೊಳ್ಳಬೇಕು !