ಕಥಿತ 7 ಕೋಟಿ ರೂಪಾಯಿ ಅವ್ಯವಹಾರದ ಆರೋಪವನ್ನು ಪ್ರಧಾನಮಂತ್ರಿ ಕಾರ್ಯಾಲಯ ದಾಖಲಿಸಿಕೊಂಡಿದೆ

ನವದೆಹಲಿ – ಅಯೋಧ್ಯೆಯ ಶ್ರೀರಾಮಮಂದಿರದ ದೇಣಿಗೆಯಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಾಡಿರುವ ಆರೋಪವನ್ನು ಪ್ರಧಾನಮಂತ್ರಿ ಕಾರ್ಯಾಲಯವು ಗಮನಕ್ಕೆ ತೆಗೆದುಕೊಂಡು ‘ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್’ನಿಂದ ವರದಿ ಕೇಳಿದೆ. ಭಾಜಪ ಮುಖಂಡ ಡಾ. ರಜನೀಶ್ ಸಿಂಗ್ ಈ ಪ್ರಕರಣದ ಕುರಿತು ಕೇಂದ್ರ ತನಿಖೆಗೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆದ ನಂತರ ಈ ವರದಿಯನ್ನು ಕೇಳಲಾಗಿದೆ.
ಟ್ರಸ್ಟ್ ಆರೋಪಗಳನ್ನು ತಳ್ಳಿಹಾಕಿದೆ !
ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅವ್ಯವಹಾರದ ಆರೋಪಗಳನ್ನು ತಳ್ಳಿಹಾಕಿದ್ದು, ದೇಣಿಗೆ ಹಣದ ನಿಯಮಿತ ಆಡಿಟ್ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಟ್ರಸ್ಟ್ ಮತ್ತು ಬ್ಯಾಂಕ್ ಪ್ರತಿನಿಧಿಗಳ ಸಮ್ಮುಖದಲ್ಲಿಯೇ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ಮಂದಿರ ಟ್ರಸ್ಟ್ನ ಪದಾಧಿಕಾರಿಗಳ ಸಭೆಯೂ ನಡೆದಿದೆ. ದೇಣಿಗೆ ಹಣ, ಅದರ ಬಳಕೆ ಮತ್ತು ಲೆಕ್ಕಾಚಾರದ ಕುರಿತು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಗೃಹಿಣಿಯರು ರಾಷ್ಟ್ರ ನಿರ್ಮಾತೃಗಳು! – ಸರ್ವೋಚ್ಚ ನ್ಯಾಯಾಲಯ
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ನಿಯತ್, ನೀತಿ ಮತ್ತು ನಿರ್ಣಯಗಳಿಂದ ದೇಶದ ಅಭಿವೃದ್ಧಿಗೆ ವೇಗ! – ಪ್ರಧಾನಮಂತ್ರಿ : PM Narendra Modi
‘ಶ್ರೀರಾಮನು ದಶರಥನ ಪುತ್ರನಾಗಿರಲಿಲ್ಲ !’ (ಅಂತೆ) : Prof. Bhagwan
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಾಯಕ ನಿಜಾಮ್ ಅಲಿಯಾಸ್ ಇಬ್ರಾಹಿಂ ಬಂಧನ!
ಹಿಂದೂತ್ವನಿಷ್ಠ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಜಾಕೀರ್ಗೆ ಮಧ್ಯಂತರ ಜಾಮೀನು!