ಪ್ರಭು ಶ್ರೀರಾಮಚಂದ್ರರ ಅವಮಾನವನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ ! – ಪ್ರಮೋದ್ ಮುತಾಲಿಕ್

ಕೆ.ಎಸ್. ಭಗವಾನ್ ಅವರ ಪ್ರಭು ಶ್ರೀರಾಮನ ಕುರಿತಾದ ಆಕ್ಷೇಪಾರ್ಹ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್

ಪ್ರೊ. ಭಗವಾನ್ ಮತ್ತು ಶ್ರೀ ರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಪ್ರಮೋದ್ ಮುತಾಲಿಕ್

ಧಾರವಾಡ (ಕರ್ನಾಟಕ) – ಪ್ರೊ. ಕೆ.ಎಸ್. ಭಗವಾನ್ ಅವರು ಪ್ರಭು ಶ್ರೀರಾಮನ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಳಿಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್, “ಪ್ರಭು ಶ್ರೀರಾಮಚಂದ್ರರ ಅವಮಾನವನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ. ಪ್ರಭು ಶ್ರೀರಾಮಚಂದ್ರರ ಜನ್ಮದ ಕುರಿತು ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಭಗವಾನ್ ಅವರನ್ನು ಸರ್ಕಾರವೇ ಸ್ವತಃ ತಕ್ಷಣ ಬಂಧಿಸಿ ಜೈಲಿಗೆ ಹಾಕಬೇಕು. ಭಗವಾನ್ ಅವರು ಹಿಂದೂ ದೇವತೆಗಳು ಮತ್ತು ಧಾರ್ಮಿಕ ನಂಬಿಕೆಗಳ ಬಗ್ಗೆ ನಿರಂತರವಾಗಿ ಅಪಮಾನಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಅವರು ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ, ಶ್ರೀರಾಮ ಸೇನೆಯು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ,” ಎಂದರು.