ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರ ಹೇಳಿಕೆ

ನವದೆಹಲಿ – ಮುಂದಿನ ವರ್ಷದ ವೇಳೆಗೆ ಒಂದು ಅಥವಾ ಎರಡು ರಾಜ್ಯಗಳನ್ನು ಹೊರತುಪಡಿಸಿ ಇಡೀ ಈಶಾನ್ಯ ಭಾರತದಿಂದ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ’ಯನ್ನು (ಅಫ್ಸ್ಫಾ) ಹಿಂಪಡೆಯಬಹುದು ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಇಲ್ಲಿ ಹೇಳಿಕೆ ನೀಡಿದ್ದಾರೆ.
ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ತೈಲ ಮತ್ತು ಖನಿಜಗಳ ಉತ್ಖನನಕ್ಕಾಗಿ ಕೇಂದ್ರ ಸರಕಾರ ಹಾಗೂ ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯ ಸರಕಾರಗಳ ನಡುವೆ ತ್ರಿಪಕ್ಷೀಯ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಆ ಸಂದರ್ಭದಲ್ಲಿ ಗೃಹಮಂತ್ರಿಗಳು ಮಾತನಾಡುತ್ತಿದ್ದರು.
ಈಶಾನ್ಯ ಭಾರತದಲ್ಲಿ ಶಾಶ್ವತ ಶಾಂತಿ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಸರಕಾರವು ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗೃಹಮಂತ್ರಿಗಳು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2019 ರಿಂದ ಹಲವಾರು ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಇದರಿಂದಾಗಿ ಹಿಂಸಾತ್ಮಕ ಘಟನೆಗಳಲ್ಲಿ ಶೇಕಡಾ 80 ರಷ್ಟು ಇಳಿಕೆಯಾಗಿದೆ ಮತ್ತು ‘ಸಶಸ್ತ್ರ ಪಡೆಗಳ ಕಾಯ್ದೆ’ಯ ವ್ಯಾಪ್ತಿಗೆ ಬರುವ ಒಟ್ಟು ವಿಸ್ತೀರ್ಣದಲ್ಲೂ ಶೇಕಡಾ 80 ರಷ್ಟು ಇಳಿಕೆಯಾಗಿದೆ. ಇಂದು ಇಡೀ ಈಶಾನ್ಯ ಭಾರತವು ‘ರಾಷ್ಟ್ರ ಪ್ರಥಮ’ ಎಂಬ ಭಾವನೆಯೊಂದಿಗೆ ಮುನ್ನಡೆಯುತ್ತಿದೆ. ಈ ಒಪ್ಪಂದವು ಈ ಪ್ರದೇಶದ ಪ್ರಗತಿಗೆ ದಾರಿ ಮಾಡಿಕೊಡಲಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ