ದೊಣ್ಣೆ ಮತ್ತು ಲಾಠಿಗಳೂ ಜಪ್ತಿ
ಭಯೋತ್ಪಾದನೆ ಹರಡಲು ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ ಎಂದು ಭಾಜಪ ಆರೋಪ

ಕೊಲಕಾತಾ (ಬಂಗಾಳ) – ಇಲ್ಲಿನ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಮಾಜಿ ಶಾಸಕ ರಾಮೇಂದು ಸಿಂಹ ರಾಯ್ ಅವರ ನಿವಾಸದ ಸಮೀಪವಿರುವ ಕಾಲೇಜೊಂದರ ಆವರಣದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಸರಕಾರಿ ಪರಿಹಾರ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಪೊಲೀಸರಿಗೆ ದೊಣ್ಣೆ ಮತ್ತು ಲಾಠಿಗಳ ಸಂಗ್ರಹವೂ ಪತ್ತೆಯಾಗಿದೆ. ಈ ಘಟನೆಯ ನಂತರ, ಭಾಜಪ ಶಾಸಕ ಸಂತು ಪಾನ್ ಅವರು ಜಪ್ತಿ ಮಾಡಲಾದ ಲಾಠಿಗಳು ಸಾಮಾನ್ಯ ಬಳಕೆಯದ್ದಲ್ಲ, ಬದಲಿಗೆ ಅವುಗಳನ್ನು ನಡುಕ ಹುಟ್ಟಿಸಲು ಅಥವಾ ಹಿಂಸಾಚಾರಕ್ಕಾಗಿ ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಪರಿಹಾರ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸಲು ಯತ್ನಿಸಲಾಗುತ್ತಿತ್ತು ಎಂದೂ ಅವರು ಹೇಳಿದ್ದಾರೆ. ಭಾಜಪವು ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ಪೂರ್ವ ವರ್ಧಮಾನ್ ಜಿಲ್ಲೆಯಲ್ಲಿ ನಡೆದ ದಾಳಿಯ ನಂತರ ತೃಣಮೂಲ ಕಾಂಗ್ರೆಸ್ ಶಾಸಕ ತಪನ್ ಚಟರ್ಜಿ ಅವರ ನಿವಾಸದಿಂದ ಟಾರ್ಪಲ, ಕಂಬಳಿಗಳು, ಫುಟ್ ಬಾಲ್, ವಾಲಿಬಾಲ್ ಮತ್ತು ಇತರ ಸರಕಾರಿ ಪರಿಹಾರ ಸಾಮಗ್ರಿಗಳನ್ನು ಜಪ್ತಿ ಮಾಡಿ ಅವರನ್ನು ಬಂಧಿಸಲಾಗಿತ್ತು.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ