ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು

ಬೆಂಗಳೂರು – ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಬೆಂಗಳೂರಿನ ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಲ್ ಹರುವೇಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಹರುವೇಗೌಡ ಅವರು, ಸಂತೋಷ್ ಅವರು ನೆಹರು ಮತ್ತು ಸಾವರ್ಕರ್ ಅವರನ್ನು ಜೋಡಿಸಿ ಮಾಡಿರುವ ಹೇಳಿಕೆಯು ಐತಿಹಾಸಿಕ ಸತ್ಯಗಳನ್ನು ತಿರುಚುವಂತದ್ದಾಗಿದ್ದು ದೇಶಕ್ಕಾಗಿ ನೆಹರು ಅವರು ನೀಡಿದ ಕೊಡುಗೆಯನ್ನು ಕೀಳಾಗಿ ಕಾಣುವಂತದ್ದಾಗಿದೆ ಎಂದು ಆರೋಪಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ನಾಯಕರ ವಿರುದ್ಧ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರಕಾರವು ಕಾಯ್ದೆಬದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.